<p><strong>ಆನೇಕಲ್</strong>: ಎರಡು ವರ್ಷದಿಂದ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆ ಮಾಡಲು ಪೋಷಕರು ನಿರಾಕರಿಸಿದ್ದರಿಂದ ನೊಂದ ಯುವಕನೊಬ್ಬ ಮದ್ಯದ ನಶೆಯಲ್ಲಿ ಇಂಡ್ಲವಾಡಿ ಸಮೀಪದ ಸಿದ್ದನಪಾಳ್ಯ ಬಳಿ ಬುಧವಾರ ಹೈಟೆನ್ಷನ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಯುವಕನನ್ನು ರಕ್ಷಿಸಿದ್ದಾರೆ.</p>.<p>ಮದ್ಯದ ಅಮಲಿನಲ್ಲಿದ್ದ ತಾಲ್ಲೂಕಿನ ಸಿದ್ದನಪಾಳ್ಯದ ನಿವಾಸಿ ಸೋಮಶೇಖರ್(23) ತಾನು ಪ್ರೀತಿಸಿದ ಹುಡುಗಿಯೊಂದಿಗೆ ಮದುವೆ ಮಾಡಿಸುವಂತೆ ಬುಧವಾರ ಬೆಳಗ್ಗೆ ಪೋಷಕರನ್ನು ಕೇಳಿದ್ದಾರೆ. ಆದರೆ ಪೋಷಕರು ಮೊದಲು ಕುಡಿತ ಬಿಡು ಎಂದು ಬುದ್ದಿ ಮಾತು ಹೇಳಿದ್ದಾರೆ.ಇದರಿಂದ ನೊಂದು ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.</p>.<p>ಇದಕ್ಕೂ ಮೊದಲು ಮನೆಯ ಸಿಮೆಂಟ್ ಶೀಟ್ ಒಡೆದು ಮನೆಯಲ್ಲಿಯೇ ದಾಂಧಲೆ ನಡೆಸಿದ್ದ. ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡುವುದಾಗಿ ಹೆದರಿಸಿದ್ದರು.</p>.<p>ಇದರಿಂದ ಸಿಟ್ಟಿಗೆದ್ದು ಹೈ ಟೆನ್ಷನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ. ತಾನು ಪ್ರೀತಿಸುವ ಹುಡುಗಿ ಬಂದರೆ ಮಾತ್ರ ಕೆಳಗಡೆ ಇಳಿಯುವುದಾಗಿ ಹಟ ಹಿಡಿದ. ಪ್ರೀತಿಸಿದ ಹುಡುಗಿಯೂ ಮದುವೆಗೆ ನಿರಾಕರಿಸಿದ್ದಳು ಎನ್ನಲಾಗಿದೆ.</p>.<p>ಸ್ಥಳೀಯರು ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸ್ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸತತ ನಾಲ್ಕು ತಾಸು ಯುವಕನ ಮನವೊಲಿಕೆ ಕಾರ್ಯದಲ್ಲಿ ತೊಡಗಿದ್ದರು. ಈ ಹೈಡ್ರಾಮಾ ನೋಡಲು ನೂರಾರು ಜನರು ಸ್ಥಳದಲ್ಲಿ ಸೇರಿದ್ದರು. ಕೊನೆಗೂ ಯುವಕನ ಮನವೊಲಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆತನನ್ನು ಕಂಬದಿಂದ ಕೆಳಗೆ ಕರೆತರುವಲ್ಲಿ ಯಶಸ್ವಿಯಾದರು.</p>.<p><em><strong>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</strong></em><strong><br></strong>260521-18-914088275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್</strong>: ಎರಡು ವರ್ಷದಿಂದ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆ ಮಾಡಲು ಪೋಷಕರು ನಿರಾಕರಿಸಿದ್ದರಿಂದ ನೊಂದ ಯುವಕನೊಬ್ಬ ಮದ್ಯದ ನಶೆಯಲ್ಲಿ ಇಂಡ್ಲವಾಡಿ ಸಮೀಪದ ಸಿದ್ದನಪಾಳ್ಯ ಬಳಿ ಬುಧವಾರ ಹೈಟೆನ್ಷನ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಯುವಕನನ್ನು ರಕ್ಷಿಸಿದ್ದಾರೆ.</p>.<p>ಮದ್ಯದ ಅಮಲಿನಲ್ಲಿದ್ದ ತಾಲ್ಲೂಕಿನ ಸಿದ್ದನಪಾಳ್ಯದ ನಿವಾಸಿ ಸೋಮಶೇಖರ್(23) ತಾನು ಪ್ರೀತಿಸಿದ ಹುಡುಗಿಯೊಂದಿಗೆ ಮದುವೆ ಮಾಡಿಸುವಂತೆ ಬುಧವಾರ ಬೆಳಗ್ಗೆ ಪೋಷಕರನ್ನು ಕೇಳಿದ್ದಾರೆ. ಆದರೆ ಪೋಷಕರು ಮೊದಲು ಕುಡಿತ ಬಿಡು ಎಂದು ಬುದ್ದಿ ಮಾತು ಹೇಳಿದ್ದಾರೆ.ಇದರಿಂದ ನೊಂದು ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.</p>.<p>ಇದಕ್ಕೂ ಮೊದಲು ಮನೆಯ ಸಿಮೆಂಟ್ ಶೀಟ್ ಒಡೆದು ಮನೆಯಲ್ಲಿಯೇ ದಾಂಧಲೆ ನಡೆಸಿದ್ದ. ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡುವುದಾಗಿ ಹೆದರಿಸಿದ್ದರು.</p>.<p>ಇದರಿಂದ ಸಿಟ್ಟಿಗೆದ್ದು ಹೈ ಟೆನ್ಷನ್ ವಿದ್ಯುತ್ ಕಂಬ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ. ತಾನು ಪ್ರೀತಿಸುವ ಹುಡುಗಿ ಬಂದರೆ ಮಾತ್ರ ಕೆಳಗಡೆ ಇಳಿಯುವುದಾಗಿ ಹಟ ಹಿಡಿದ. ಪ್ರೀತಿಸಿದ ಹುಡುಗಿಯೂ ಮದುವೆಗೆ ನಿರಾಕರಿಸಿದ್ದಳು ಎನ್ನಲಾಗಿದೆ.</p>.<p>ಸ್ಥಳೀಯರು ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸ್ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸತತ ನಾಲ್ಕು ತಾಸು ಯುವಕನ ಮನವೊಲಿಕೆ ಕಾರ್ಯದಲ್ಲಿ ತೊಡಗಿದ್ದರು. ಈ ಹೈಡ್ರಾಮಾ ನೋಡಲು ನೂರಾರು ಜನರು ಸ್ಥಳದಲ್ಲಿ ಸೇರಿದ್ದರು. ಕೊನೆಗೂ ಯುವಕನ ಮನವೊಲಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಆತನನ್ನು ಕಂಬದಿಂದ ಕೆಳಗೆ ಕರೆತರುವಲ್ಲಿ ಯಶಸ್ವಿಯಾದರು.</p>.<p><em><strong>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</strong></em><strong><br></strong>260521-18-914088275</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>