<p><strong>ದೊಡ್ಡಬಳ್ಳಾಪುರ</strong>: ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.1 ರಿಂದ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷೆ ನಳಿನಾಕ್ಷಿ ಹೇಳಿದ್ದಾರೆ.</p>.<p>ಕೇಂದ್ರ ಸರ್ಕಾರದ ಸಚಿವರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು. ಇದಲ್ಲದೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಧರಣಿಯಲ್ಲಿ ರಾಜ್ಯದ ಎಲ್ಲಾ ಅಂಗನವಾಡಿ ನೌಕರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.</p>.<p>ಬೇಡಿಕೆಗಳು: ಐಸಿಡಿಸಿ ಯೋಜನೆಯ ಸುವರ್ಣ ಮಹೋತ್ಸವನ್ನು ಕೆಂದ್ರ ಸರ್ಕಾರ ಆಚರಿಸಬೇಕು. ಐಸಿಡಿಸಿ ಯೋಜನೆಯನ್ನು ಕಾಯಂ ಮಾಡಬೇಕು, ಕಾಯಂ ಮಾಡುವ ತನಕ ಪ್ರತ್ಯೇಕ ನಿರ್ದೇಶನಾಲಯ ರಚಿಸಬೇಕು. ಅಂಗನವಾಡಿಗಳ ಘಟಕ ವೆಚ್ಚ ಹೆಚ್ಚಳವನ್ನು ಕೂಡಲೇ ಮಾಡಬೇಕು ಮತ್ತು ಸ್ಥಳೀಯ ಆಹಾರ ಪದಾರ್ಥಗಳನ್ನು ನೀಡಬೇಕು.</p>.<p>2018 ರಿಂದ ಅಂಗನವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ. ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ ₹2,700, ಸಹಾಯಕಿಗೆ ₹1,350 ಮಾತ್ರವೇ ನೀಡುತ್ತಿದೆ. ಕನಿಷ್ಠ ವೇತನವನ್ನಾದರೂ ಜಾರಿ ಮಾಡಬೇಕು. ಎಫ್ಆರ್ಎಸ್ ರದ್ದು ಮಾಡಬೇಕು. ಇಲ್ಲದಿದ್ದಲ್ಲಿ 6 ತಿಂಗಳಿಗೊಮ್ಮೆ ಎಫ್.ಆರ್.ಎಸ್ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವೈಪೈ ವ್ಯವಸ್ಥೆ ನೀಡಬೇಕು. ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಗಳಿಂದ ಬಿಡುಗಡೆಗೊಳಿಸಬೇಕು. ಅಂಗನವಾಡಿ ನೌಕರರನ್ನು 3 ಮತ್ತು 4ನೇ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.1 ರಿಂದ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷೆ ನಳಿನಾಕ್ಷಿ ಹೇಳಿದ್ದಾರೆ.</p>.<p>ಕೇಂದ್ರ ಸರ್ಕಾರದ ಸಚಿವರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು. ಇದಲ್ಲದೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಧರಣಿಯಲ್ಲಿ ರಾಜ್ಯದ ಎಲ್ಲಾ ಅಂಗನವಾಡಿ ನೌಕರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.</p>.<p>ಬೇಡಿಕೆಗಳು: ಐಸಿಡಿಸಿ ಯೋಜನೆಯ ಸುವರ್ಣ ಮಹೋತ್ಸವನ್ನು ಕೆಂದ್ರ ಸರ್ಕಾರ ಆಚರಿಸಬೇಕು. ಐಸಿಡಿಸಿ ಯೋಜನೆಯನ್ನು ಕಾಯಂ ಮಾಡಬೇಕು, ಕಾಯಂ ಮಾಡುವ ತನಕ ಪ್ರತ್ಯೇಕ ನಿರ್ದೇಶನಾಲಯ ರಚಿಸಬೇಕು. ಅಂಗನವಾಡಿಗಳ ಘಟಕ ವೆಚ್ಚ ಹೆಚ್ಚಳವನ್ನು ಕೂಡಲೇ ಮಾಡಬೇಕು ಮತ್ತು ಸ್ಥಳೀಯ ಆಹಾರ ಪದಾರ್ಥಗಳನ್ನು ನೀಡಬೇಕು.</p>.<p>2018 ರಿಂದ ಅಂಗನವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ. ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ ₹2,700, ಸಹಾಯಕಿಗೆ ₹1,350 ಮಾತ್ರವೇ ನೀಡುತ್ತಿದೆ. ಕನಿಷ್ಠ ವೇತನವನ್ನಾದರೂ ಜಾರಿ ಮಾಡಬೇಕು. ಎಫ್ಆರ್ಎಸ್ ರದ್ದು ಮಾಡಬೇಕು. ಇಲ್ಲದಿದ್ದಲ್ಲಿ 6 ತಿಂಗಳಿಗೊಮ್ಮೆ ಎಫ್.ಆರ್.ಎಸ್ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವೈಪೈ ವ್ಯವಸ್ಥೆ ನೀಡಬೇಕು. ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಗಳಿಂದ ಬಿಡುಗಡೆಗೊಳಿಸಬೇಕು. ಅಂಗನವಾಡಿ ನೌಕರರನ್ನು 3 ಮತ್ತು 4ನೇ ದರ್ಜೆಯ ನೌಕರರನ್ನಾಗಿ ಪರಿಗಣಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>