<p><strong>ದೇವನಹಳ್ಳಿ:</strong> ತಾಲ್ಲೂಕಿನ ಸಾವಕನಹಳ್ಳಿಯಲ್ಲಿ ಭಾನುವಾರ ಮಹಾಗಣಪತಿ, ನಾಗದೇವತಾ ಪ್ರತಿಷ್ಠಾಪನೆ, ಅಶ್ವತ್ಥ ಕಲ್ಯಾಣ ಮಹೋತ್ಸವವೂ ಅದ್ದೂರಿಯಾಗಿ ಜರುಗಿತು.</p>.<p>ಗ್ರಾಮದೇವತೆಗಳಾದ ವೇಣುಗೋಪಾಲಸ್ವಾಮಿ, ಅಣ್ಣಮ್ಮ, ಚೌಡೇಶ್ವರಿ, ಗಂಗಮ್ಮ, ದೊಡ್ಡಮ್ಮ, ಸಪ್ಪಲಮ್ಮ, ಮುನೇಶ್ವರ, ಆಂಜನೇಯಸ್ವಾಮಿಗಳ ಉತ್ಸವ ಮೂರ್ತಿಗಳಿಗೆ ಪೂಜೆ ನೇರವೇರಿಸಿ ಉತ್ಸವ ಮಾಡಲಾಯಿತು.</p>.<p>ಆನೆಯ ಮೇಲೆ ನಾಡದೇವತೆ ಅಣ್ಣಮ್ಮ ದೇವಿಯ ಉತ್ಸವ ಮೂರ್ತಿ ಇಟ್ಟು, ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು. ಭಕ್ತರು ಗ್ರಾಮಸ್ಥರು ತಾಯಿಯ ದರ್ಶನ ಪಡೆದು ಪುನೀತರಾದರು. ಚಿಣ್ಣರು ಆನೆಯನ್ನು ಕಂಡು ಸಂತಸ ಪಟ್ಟರು.</p>.<p>ವಿವಿಧ ಹೋಮ ಹವನ, ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗ್ರಾಮದ ಅಶ್ವತ್ಥ ಕಟ್ಟೆಯಲ್ಲಿ ನಾಗದೇವತೆಯನ್ನು ಪ್ರತಿಷ್ಠಾಪನೆ ಮಾಡಲಾಯಿತು. ಕುಂಬಾಭಿಷೇಕ, ಪಂಚಾಮೃತ ಅಭಿಷೇಕದ ನೆರವೇರಿಸಿ, ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಪ್ರಸಾದದ ವ್ಯವಸ್ಥೆ ಮಾಡಲಾಯಿತು.</p>.<p>ಜಾತ್ರೆಯ ಬೊಂಬೆ ಕುಣಿತಕ್ಕೆ, ತಮಟೆ ನಾದನಕ್ಕೆ ಯುವಕರು ಕುಣ್ಣಿದು ಕುಪ್ಪಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯಿಲಿ, ಬಿದಲೂರು ಗ್ರಾಪಂ ಅಧ್ಯಕ್ಷ ಎಸ್.ಪಿ.ಮುನಿರಾಜು, ಚಿನ್ನಪ್ಪ ಸೇರಿದಂತೆ ಗ್ರಾಮದ ಹಿರಿಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ತಾಲ್ಲೂಕಿನ ಸಾವಕನಹಳ್ಳಿಯಲ್ಲಿ ಭಾನುವಾರ ಮಹಾಗಣಪತಿ, ನಾಗದೇವತಾ ಪ್ರತಿಷ್ಠಾಪನೆ, ಅಶ್ವತ್ಥ ಕಲ್ಯಾಣ ಮಹೋತ್ಸವವೂ ಅದ್ದೂರಿಯಾಗಿ ಜರುಗಿತು.</p>.<p>ಗ್ರಾಮದೇವತೆಗಳಾದ ವೇಣುಗೋಪಾಲಸ್ವಾಮಿ, ಅಣ್ಣಮ್ಮ, ಚೌಡೇಶ್ವರಿ, ಗಂಗಮ್ಮ, ದೊಡ್ಡಮ್ಮ, ಸಪ್ಪಲಮ್ಮ, ಮುನೇಶ್ವರ, ಆಂಜನೇಯಸ್ವಾಮಿಗಳ ಉತ್ಸವ ಮೂರ್ತಿಗಳಿಗೆ ಪೂಜೆ ನೇರವೇರಿಸಿ ಉತ್ಸವ ಮಾಡಲಾಯಿತು.</p>.<p>ಆನೆಯ ಮೇಲೆ ನಾಡದೇವತೆ ಅಣ್ಣಮ್ಮ ದೇವಿಯ ಉತ್ಸವ ಮೂರ್ತಿ ಇಟ್ಟು, ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು. ಭಕ್ತರು ಗ್ರಾಮಸ್ಥರು ತಾಯಿಯ ದರ್ಶನ ಪಡೆದು ಪುನೀತರಾದರು. ಚಿಣ್ಣರು ಆನೆಯನ್ನು ಕಂಡು ಸಂತಸ ಪಟ್ಟರು.</p>.<p>ವಿವಿಧ ಹೋಮ ಹವನ, ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗ್ರಾಮದ ಅಶ್ವತ್ಥ ಕಟ್ಟೆಯಲ್ಲಿ ನಾಗದೇವತೆಯನ್ನು ಪ್ರತಿಷ್ಠಾಪನೆ ಮಾಡಲಾಯಿತು. ಕುಂಬಾಭಿಷೇಕ, ಪಂಚಾಮೃತ ಅಭಿಷೇಕದ ನೆರವೇರಿಸಿ, ವಿವಿಧ ಊರುಗಳಿಂದ ಆಗಮಿಸಿದ್ದ ಭಕ್ತರು ಪ್ರಸಾದದ ವ್ಯವಸ್ಥೆ ಮಾಡಲಾಯಿತು.</p>.<p>ಜಾತ್ರೆಯ ಬೊಂಬೆ ಕುಣಿತಕ್ಕೆ, ತಮಟೆ ನಾದನಕ್ಕೆ ಯುವಕರು ಕುಣ್ಣಿದು ಕುಪ್ಪಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯಿಲಿ, ಬಿದಲೂರು ಗ್ರಾಪಂ ಅಧ್ಯಕ್ಷ ಎಸ್.ಪಿ.ಮುನಿರಾಜು, ಚಿನ್ನಪ್ಪ ಸೇರಿದಂತೆ ಗ್ರಾಮದ ಹಿರಿಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>