ದೊಡ್ಡಬಳ್ಳಾಪುರ:ನಗರದ ರೈಲ್ವೆ ನಿಲ್ದಾಣದ ಬೆಸೆಂಟ್ ಪಾರ್ಕ್ ರಸ್ತೆಯ ಶಿರಡಿ ಸಾಯಿಬಾಬಾ ದೇವಾಲಯದಲ್ಲಿ ಶಿರಡಿ ಸಾಯಿಬಾಬಾ ಸೇವಾ ಟ್ರಸ್ಟ್ ವತಿಯಿಂದ 9ನೇ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.
ಬೆಳಿಗ್ಗೆ ನಡೆದ ಕಾಕಡಾರತಿ, ಪನ್ನೀರು ಅಭಿಷೇಕದಲ್ಲಿ ಭಕ್ತಾದಿಗಳು ಪನ್ನೀರು ಅಭಿಷೇಕ ನೆರವೇರಿಸಿದರು. ನಂತರ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಪೂಜೆ ಹಾಗೂ ಭಜನೆ ಆರತಿ ದೂಪ ಪೂಜಾ ಕಾರ್ಯಕ್ರಮಗಳು ನಡೆದವು.
ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಸಂಜೆ ಸಾಯಿ ಭಜನಾ ಮಂಡಳಿಯಿಂದ ಭಜನೆ ನಡೆಯಿತು.