<p><strong>ಹೊಸಕೋಟೆ</strong>: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಂಡವಾಳ ಶಾಹಿಗಳ ಪರವಾಗಿ ಕೆಲಸ ಮಾಡುತ್ತಿವೆಯೋ ಅಥವಾ ದಮನಿತ ಪರವಾಗಿ ಕೆಲಸ ಮಾಡುತ್ತಿದೆಯೋ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಹರಿಂದ್ರ ಹೇಳಿದರು.</p>.<p>ಹಾಸನನದಲ್ಲಿ ನಡೆಯುವ ಸಿಐಟಿಯು ಸಮ್ಮೇಳನ ಪ್ರಯುಕ್ತ ಸಹಿ ಸಂಗ್ರಹ ಅಭಿಯಾನ ಹಾಗೂ ಧ್ವಜ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ರೈತರು ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆ ಸಿಗದಿರುವುದು ಒಂದೆಡೆಯಾದರೆ ಸರ್ಕಾರಗಳು ಕಾರ್ಮಿಕ ವರ್ಗದ ಪರವಾಗಿದ್ದ ಕಾನೂನುಗಳನ್ನು ಬಂಡಾವಳಶಾಹಿಗಳ ಪರವಾಗಿ ರೂಪಿಸುತ್ತಿವೆ. ಇತ್ತೀಚೆಗೆ ಕೇಂದ್ರ ಸರ್ಕಾರ 8 ಗಂಟೆ ಕಾರ್ಯಾವಧಿಗೆ ಬದಲಿಯಾಗಿ 12 ಗಂಟೆ ಕೆಲಸದ ಅವಧಿ ನಿಗದಿ ಮಾಡುತ್ತಿದೆ. ಆದರೆ ಅವರಿಗೆ ಕನಿಷ್ಠ ₹15,000 ಇರುವ ವೇತನವನ್ನು ಗರಿಷ್ಠ ₹36,000ಕ್ಕೆ ಏರಿಸುವ ಬಗ್ಗೆ ಸರ್ಕಾರಗಳು ಕ್ರಮ ಕೈಗೊಂಡಿಲ್ಲ ಎಂದರು.</p>.<p>ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗ, ಗುಣಮಟ್ಟದ ಶಿಕ್ಷಣ, ಗುಣಮಟ್ಟದ ಉಚಿತ ಆರೋಗ್ಯ ದೇಶದ ಜನತೆಗೆ ಮರಿಚೀಕೆಯಾಗಿದೆ. ಇದನ್ನು ಜನರಿಗೆ ತಿಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾರ ಪರ ಕೆಲಸ ಮಾಡುತ್ತಿವೆ ಎಂಬುದನ್ನು ಜನರಿಗೆ ತಿಳಿಸುವ ಸಲುವಾಗಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲೂ ಕನಿಷ್ಠ 6 ಸಾವಿರ ಮನೆಗಳಿಗೆ ತೆರಳಿ ಸಹಿ ಸಂಗ್ರಹಿಸುವ ಕಾರ್ಯಕ್ಕೆ ಮುಂದಿನವಾರದಿಂದ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.</p>.<p>ಹಾಸನದಲ್ಲಿ ನಡೆಯುವ ಸಮ್ಮೇಳನಕ್ಕೆ ಹಾಗೂ ಡಿ.21 ರಂದು ಸಿಪಿಐ(ಎಂ) ಪಕ್ಷ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಜನಾಂದೋಲನ ಬೃಹತ್ ಪ್ರತಿಭಟನಾ ಬಹಿರಂಗಾ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸಬೇಕೆಂದು ಮನವಿ ಮಾಡಿದರು.</p>.<p>ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯ ಚಂದ್ರತೇಜಸ್ವಿ, ಮುನಿರಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಂಡವಾಳ ಶಾಹಿಗಳ ಪರವಾಗಿ ಕೆಲಸ ಮಾಡುತ್ತಿವೆಯೋ ಅಥವಾ ದಮನಿತ ಪರವಾಗಿ ಕೆಲಸ ಮಾಡುತ್ತಿದೆಯೋ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕೆಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಹರಿಂದ್ರ ಹೇಳಿದರು.</p>.<p>ಹಾಸನನದಲ್ಲಿ ನಡೆಯುವ ಸಿಐಟಿಯು ಸಮ್ಮೇಳನ ಪ್ರಯುಕ್ತ ಸಹಿ ಸಂಗ್ರಹ ಅಭಿಯಾನ ಹಾಗೂ ಧ್ವಜ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ರೈತರು ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆ ಸಿಗದಿರುವುದು ಒಂದೆಡೆಯಾದರೆ ಸರ್ಕಾರಗಳು ಕಾರ್ಮಿಕ ವರ್ಗದ ಪರವಾಗಿದ್ದ ಕಾನೂನುಗಳನ್ನು ಬಂಡಾವಳಶಾಹಿಗಳ ಪರವಾಗಿ ರೂಪಿಸುತ್ತಿವೆ. ಇತ್ತೀಚೆಗೆ ಕೇಂದ್ರ ಸರ್ಕಾರ 8 ಗಂಟೆ ಕಾರ್ಯಾವಧಿಗೆ ಬದಲಿಯಾಗಿ 12 ಗಂಟೆ ಕೆಲಸದ ಅವಧಿ ನಿಗದಿ ಮಾಡುತ್ತಿದೆ. ಆದರೆ ಅವರಿಗೆ ಕನಿಷ್ಠ ₹15,000 ಇರುವ ವೇತನವನ್ನು ಗರಿಷ್ಠ ₹36,000ಕ್ಕೆ ಏರಿಸುವ ಬಗ್ಗೆ ಸರ್ಕಾರಗಳು ಕ್ರಮ ಕೈಗೊಂಡಿಲ್ಲ ಎಂದರು.</p>.<p>ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗ, ಗುಣಮಟ್ಟದ ಶಿಕ್ಷಣ, ಗುಣಮಟ್ಟದ ಉಚಿತ ಆರೋಗ್ಯ ದೇಶದ ಜನತೆಗೆ ಮರಿಚೀಕೆಯಾಗಿದೆ. ಇದನ್ನು ಜನರಿಗೆ ತಿಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾರ ಪರ ಕೆಲಸ ಮಾಡುತ್ತಿವೆ ಎಂಬುದನ್ನು ಜನರಿಗೆ ತಿಳಿಸುವ ಸಲುವಾಗಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲೂ ಕನಿಷ್ಠ 6 ಸಾವಿರ ಮನೆಗಳಿಗೆ ತೆರಳಿ ಸಹಿ ಸಂಗ್ರಹಿಸುವ ಕಾರ್ಯಕ್ಕೆ ಮುಂದಿನವಾರದಿಂದ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.</p>.<p>ಹಾಸನದಲ್ಲಿ ನಡೆಯುವ ಸಮ್ಮೇಳನಕ್ಕೆ ಹಾಗೂ ಡಿ.21 ರಂದು ಸಿಪಿಐ(ಎಂ) ಪಕ್ಷ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಜನಾಂದೋಲನ ಬೃಹತ್ ಪ್ರತಿಭಟನಾ ಬಹಿರಂಗಾ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗವಹಿಸಬೇಕೆಂದು ಮನವಿ ಮಾಡಿದರು.</p>.<p>ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯ ಚಂದ್ರತೇಜಸ್ವಿ, ಮುನಿರಾಜ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>