ಎಪಿಎಂಸಿ: ವಿಶ್ವನಾಥರೆಡ್ಡಿ ಅಧ್ಯಕ್ಷ, ಟಿ.ಮಂಜುನಾಥ್ ಉಪಾಧ್ಯಕ್ಷ

ದೊಡ್ಡಬಳ್ಳಾಪುರ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ವಿಶ್ವನಾಥರೆಡ್ಡಿ ಅಧ್ಯಕ್ಷರಾಗಿ, ಟಿ.ಮಂಜುನಾಥ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ಎಪಿಎಂಸಿ ತೆನೆಹೊತ್ತ ರೈತ ಮಹಿಳೆಯ (ಜೆಡಿಎಸ್) ತೆಕ್ಕೆಯಿಂದ ಜಾರಿ ‘ಕೈ’ (ಕಾಂಗ್ರೆಸ್) ಹಿಡಿದೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಎರಡೂ ಸ್ಥಾನಕ್ಕೂ ಜೆಡಿಎಸ್ ಅಭ್ಯರ್ಥಿ ಬಿ.ವಿ.ಲೋಕೇಶ್ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ನಿಂದ ಅಧ್ಯಕ್ಷ ಸ್ಥಾನಕ್ಕೆ ವಿಶ್ವನಾಥರೆಡ್ಡಿ, ಉಪಾಧ್ಯಕ್ಷ ಸ್ಥಾನಕ್ಕೆ ಟಿ.ಮಂಜುನಾಥ್ ಮಾತ್ರ ನಾಮಪತ್ರ ಸಲ್ಲಿಸಿದರು. ಕೊನೆಗಳಿಗೆಯಲ್ಲಿ ಬಿ.ವಿ.ಲೋಕೇಶ್ ಅವರುಎರಡೂ ಸ್ಥಾನಗಳಿಂದಲೂ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದರಿಂದ ಅವಿರೋಧ ಆಯ್ಕೆ ನಡೆಯಿತು.
13 ನಿರ್ದೇಶಕ ಸ್ಥಾನಗಳನ್ನು ಹೊಂದಿರುವ ಎಪಿಎಂಸಿಯಲ್ಲಿ 7 ಕಾಂಗ್ರೆಸ್, 6 ಜೆಡಿಎಸ್ ಹಾಗೂ 3 ಬಿಜೆಪಿ ನಾಮ ನಿರ್ದೇಶಕರು ಇದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಎಪಿಎಂಸಿಗೆ ಜೆಡಿಎಸ್ನ ಮಂಜುನಾಥ್ ಅಧ್ಯಕ್ಷರಾಗಿದ್ದರು.
ಜೆಡಿಎಸ್ಗೆ ಮುಳುವಾದ ಬಣ: 6 ಜನ ನಿರ್ದೇಶಕರನ್ನು ಹೊಂದಿದ್ದ ಜೆಡಿಎಸ್ ಪಕ್ಷಕ್ಕೆ ಮೂರು ಜನ ನಾಮ ನಿರ್ದೇಶಕರ ಬೆಂಬಲವು ಇತ್ತು. ಆದರೆ ಜೆಡಿಎಸ್ನಲ್ಲಿನ ಬಣ ರಾಜಕೀಯದಿಂದಾಗಿ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಲು ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.