ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕಕಾಲಕ್ಕೆ ಎರಡು ಚುನಾವಣೆ ದಿನ ಬದಲಾವಣೆಗೆ ಮನವಿ

Last Updated 11 ಡಿಸೆಂಬರ್ 2020, 7:01 IST
ಅಕ್ಷರ ಗಾತ್ರ

ದೇವನಹಳ್ಳಿ: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಹಾಗೂ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕರ ಸ್ಥಾನಗಳಿಗೆ ಡಿ. 27ರಂದು ಏಕಕಾಲಕ್ಕೆ ಚುನಾವಣೆ ಘೊಷಣೆಯಾಗಿದೆ. ಈ ಪೈಕಿ ಯಾವುದಾದರೂ ಒಂದು ಚುನಾವಣೆಯ ದಿನಾಂಕವನ್ನು ಬದಲಾವಣೆ ಮಾಡಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ವಿ. ಮಂಜುನಾಥ್ ಒತ್ತಾಯಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾತನಾಡಿದ ಅವರು, ಜಿಲ್ಲಾ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ವ್ಯವಸಾಯ ಸೇವಾ ಸಹಕಾರ ಸಂಘ, ಮಹಿಳಾ ಸೇವಾ ಸಹಕಾರ ಸಂಘ, ಭೂ ಅಭಿವೃದ್ಧಿ ಸಹಕಾರ ಬ್ಯಾಂಕ್, ತಾಲ್ಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಹಕಾರ ಸಂಘ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ 375ಕ್ಕೂ ಹೆಚ್ಚು ನೋಂದಾಯಿತ ಸದಸ್ಯರಿದ್ದಾರೆ. ಡಿಸಿಸಿ ಬ್ಯಾಂಕ್‌ನ 26 ನಿರ್ದೇಶಕರನ್ನು ಆಯ್ಕೆ ಮಾಡಬೇಕಿದೆ ಎಂದರು.

ಕೆಲವರು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ವರ್ಧಿಸುವವರಿದ್ದಾರೆ. ಕೆಲವರು ಪಂಚಾಯಿತಿ ಚುನಾವಣೆ ಮತ್ತು ಡಿಸಿಸಿ ಬ್ಯಾಂಕ್ ಚುನಾವಣೆಗೆ ಮತದಾನ ಮಾಡಬೇಕು. ಇದರಿಂದ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕರ ಆಯ್ಕೆಯು ಮೂರು ತಿಂಗಳ ಹಿಂದೆಯೇ ಆಗಬೇಕಿತ್ತು. ನ್ಯಾಯಾಲಯ
ದಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ನ್ಯಾಯಾಲಯದ ಆದೇಶದಂತೆ ಡಿ. 27ರಂದು ಚುನಾವಣೆ ನಡೆಸುವಂತೆ ಆದೇಶವಾಗಿದೆ. ಈ ಸಂಬಂಧ ಸೃಷ್ಟಿಯಾಗಿರುವ ಗೊಂದಲ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT