ಈಗಾಗಲೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಪ್ರಾಣಿ ಕಲ್ಯಾಣ ಮಂಡಳಿಗಳು ಪ್ರಮುಖ ಪಾತ್ರ ವಹಿಸಲಿವೆ. ಜಿಲ್ಲೆಯಲ್ಲಿ ಹಲವಾರು ಗೋಶಾಲೆಗಳು ಈ ಸಂಬಂಧಿತ ಕಾರ್ಯ ನಿರ್ವಹಿಸುತ್ತಿರುವ ಎನ್ಜಿಓಗಳನ್ನು ಗುರುತಿಸಿ ಮಂಡಳಿಗಳನ್ನು ರಚನೆ ಮಾಡಬೇಕು. ಜಿಲ್ಲಾ ಮಂಡಳಿಯಲ್ಲಿ ಅಧಿಕಾರಿಗಳು ಹಾಗೂ ಪ್ರಾಣಿ ರಕ್ಷಣೆಯಲ್ಲಿ ತೊಡಗಿರುವ ಗೋಶಾಲೆಗಳು, ಎನ್ಜಿಓಗಳನ್ನು ಒಳಗೊಂಡ ಸಭೆ ಕರೆದು ಮಂಡಳಿಯನ್ನು ಜಿಲ್ಲೆಯಾದ್ಯಂತ ಪೂರ್ಣಪ್ರಮಾಣದಲ್ಲಿ ರಚನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.