ದೇವನಹಳ್ಳಿ: ತಾಲ್ಲೂಕಿನ ಬೀರಸಂದ್ರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಜಿಲ್ಲಾ ಅಧ್ಯಕ್ಷರಾಗಿ ಚನ್ನಹಳ್ಳಿ ಬಿ. ರಾಜಣ್ಣ ಆಯ್ಕೆಯಾದರು.
ಈ ವೇಳೆ ಮಾತನಾಡಿದ ಅವರು, ಗ್ಯಾರಂಟಿಗಳ ಅನುಷ್ಠಾನದಲ್ಲಿನ ಅಡೆತಡೆ ಬಗೆಹರಿಸಿ ಸಮಾಜದ ಪ್ರತಿ ಫಲಾನುಭವಿಗಳಿಗೂ ಗ್ಯಾರಂಟಿ ತಲುಪಿಸಲು ಶ್ರಮಿಸಲಾಗುವುದು ಎಂದರು.
ಬಯಪ್ಪ ಅಧ್ಯಕ್ಷ ವಿ.ಶಾಂತ್ ಕುಮಾರ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಸಂಘಟಿಸಲಾಗುತ್ತದೆ. ರಾಜ್ಯ ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮನದಟ್ಟು ಮಾಡುವ ಪ್ರಯತ್ನ ಮಾಡಲಾಗುತ್ತದೆ ಎಂದರು.
ಬಯಪ್ಪ ಸದಸ್ಯರಾದ ಸಿ.ಪ್ರಸನ್ನಕುಮಾರ್, ರಾಮಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ನಾಗೇಗೌಡ, ನಟರಾಜ್ ಇದ್ದರು.