<p>ದೊಡ್ಡಬಳ್ಳಾಪುರ: ಐದನೇ ಹಂತದ ಕೈಗಾರಿಕಾವಲಯ ಸ್ಥಾಪನೆಗೆ ಭೂಮಿ ಸ್ವಾಧೀನಕ್ಕೆಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ನೀಡಿದ್ದ ನೋಟಿಸ್ನಿಂದ ಮನನೊಂದ ಕೊನಘಟ್ಟ ಗ್ರಾಮದ ರೈತ ಹನುಮಂತೇಗೌಡ (60) ಗುರುವಾರ ಜಮೀನಲ್ಲಿರುವ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಭೂ ಸ್ವಾಧೀನ ಪ್ರಕ್ರಿಯೆ ಆರಂಭವಾದಾಗಿನಿಂದಹನುಮಂತೇಗೌಡ ಮನನೊಂದಿದ್ದರು. ಪ್ರಾಣ ಕೊಟ್ಟಾದರೂ ಸರಿ, ಹಿರಿಯರ ಭೂಮಿ ಉಳಿಸಿಕೊಳ್ಳುತ್ತೇನೆ ಎಂದು ಹೇಳುತಿದ್ದರು. ಕೊನೆಗೆ ಕೆಐಎಡಿಬಿ ನೋಟಿಸ್ ಜೇಬಿನಲ್ಲಿ ಇಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಕೊನಘಟ್ಟ ಗ್ರಾಮದ ಬಾಬು ತಿಳಿಸಿದರು.</p>.<p>ತಾಲ್ಲೂಕಿನ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಸುತ್ತ ಮುತ್ತ ಸುಮಾರು 800 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಕೆಐಎಡಿಬಿ ರೈತರಿಗೆ ನೋಟಿಸ್ ನೀಡುತ್ತಿದೆ. ಕೈಗಾರಿಕಾ ವಲಯ ಸ್ಥಾಪನೆಗೆ ಸರ್ಕಾರ ಸ್ವಾಧೀನ ಪಡಿಸಿಕೊಳ್ಳುತ್ತಿರುವ ಬಹುತೇಕ ಜಮೀನುಗಳು ಫಲವತ್ತಾಗಿದ್ದು ದ್ರಾಕ್ಷಿ, ತೆಂಗು ಹಾಗೂ ತರಕಾರಿ ಬೆಳೆಯಲಾಗುತ್ತಿದೆ.</p>.<p class="Subhead">ಸ್ಥಳದಲ್ಲೇ ಪ್ರತಿಭಟನೆ: ರೈತರಿಂದ ಫಲವತ್ತಾದ ಕೃಷಿ ಭೂಮಿ ವಶಪಡಿಸಿಕೊಳ್ಳುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿ ರೈತರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರುಹನುಮಂತೇಗೌಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.</p>.<p>ಮುಂದಿನ ವಾರ ತಾಲ್ಲೂಕಿನ ಎಲ್ಲ ರೈತ ಸಂಘಟನೆ ಹಾಗೂ ಕನ್ನಡಪರ ಸಂಘಟನೆಗಳ ಜತೆ ಸಭೆ ನಡೆಸಿ ಭೂ ಸ್ವಾಧೀನ ಪ್ರಕ್ರಿಯೆ ನಿಲ್ಲಿಸುವಂತೆ ಪ್ರತಿಭಟನೆ ಆರಂಭಿಸಲಾಗುವುದು ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<p>ಆತ್ಮಹತ್ಯೆಗೆ ಶರಣಾಗಿರುವ ಹನುಮಂತೇಗೌಡ ಅವರಿಗೆ ಪತ್ನಿ, ನಾಲ್ವರು ಪುತ್ರಿಯರಿದ್ದು, ಎರಡೂವರೆ ಎಕರೆ ಜಮೀನಿನಲ್ಲಿ ತರಕಾರಿ ಬೆಳೆಯುತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: ಐದನೇ ಹಂತದ ಕೈಗಾರಿಕಾವಲಯ ಸ್ಥಾಪನೆಗೆ ಭೂಮಿ ಸ್ವಾಧೀನಕ್ಕೆಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ನೀಡಿದ್ದ ನೋಟಿಸ್ನಿಂದ ಮನನೊಂದ ಕೊನಘಟ್ಟ ಗ್ರಾಮದ ರೈತ ಹನುಮಂತೇಗೌಡ (60) ಗುರುವಾರ ಜಮೀನಲ್ಲಿರುವ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಭೂ ಸ್ವಾಧೀನ ಪ್ರಕ್ರಿಯೆ ಆರಂಭವಾದಾಗಿನಿಂದಹನುಮಂತೇಗೌಡ ಮನನೊಂದಿದ್ದರು. ಪ್ರಾಣ ಕೊಟ್ಟಾದರೂ ಸರಿ, ಹಿರಿಯರ ಭೂಮಿ ಉಳಿಸಿಕೊಳ್ಳುತ್ತೇನೆ ಎಂದು ಹೇಳುತಿದ್ದರು. ಕೊನೆಗೆ ಕೆಐಎಡಿಬಿ ನೋಟಿಸ್ ಜೇಬಿನಲ್ಲಿ ಇಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಕೊನಘಟ್ಟ ಗ್ರಾಮದ ಬಾಬು ತಿಳಿಸಿದರು.</p>.<p>ತಾಲ್ಲೂಕಿನ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಸುತ್ತ ಮುತ್ತ ಸುಮಾರು 800 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಕೆಐಎಡಿಬಿ ರೈತರಿಗೆ ನೋಟಿಸ್ ನೀಡುತ್ತಿದೆ. ಕೈಗಾರಿಕಾ ವಲಯ ಸ್ಥಾಪನೆಗೆ ಸರ್ಕಾರ ಸ್ವಾಧೀನ ಪಡಿಸಿಕೊಳ್ಳುತ್ತಿರುವ ಬಹುತೇಕ ಜಮೀನುಗಳು ಫಲವತ್ತಾಗಿದ್ದು ದ್ರಾಕ್ಷಿ, ತೆಂಗು ಹಾಗೂ ತರಕಾರಿ ಬೆಳೆಯಲಾಗುತ್ತಿದೆ.</p>.<p class="Subhead">ಸ್ಥಳದಲ್ಲೇ ಪ್ರತಿಭಟನೆ: ರೈತರಿಂದ ಫಲವತ್ತಾದ ಕೃಷಿ ಭೂಮಿ ವಶಪಡಿಸಿಕೊಳ್ಳುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿ ರೈತರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರುಹನುಮಂತೇಗೌಡ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.</p>.<p>ಮುಂದಿನ ವಾರ ತಾಲ್ಲೂಕಿನ ಎಲ್ಲ ರೈತ ಸಂಘಟನೆ ಹಾಗೂ ಕನ್ನಡಪರ ಸಂಘಟನೆಗಳ ಜತೆ ಸಭೆ ನಡೆಸಿ ಭೂ ಸ್ವಾಧೀನ ಪ್ರಕ್ರಿಯೆ ನಿಲ್ಲಿಸುವಂತೆ ಪ್ರತಿಭಟನೆ ಆರಂಭಿಸಲಾಗುವುದು ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<p>ಆತ್ಮಹತ್ಯೆಗೆ ಶರಣಾಗಿರುವ ಹನುಮಂತೇಗೌಡ ಅವರಿಗೆ ಪತ್ನಿ, ನಾಲ್ವರು ಪುತ್ರಿಯರಿದ್ದು, ಎರಡೂವರೆ ಎಕರೆ ಜಮೀನಿನಲ್ಲಿ ತರಕಾರಿ ಬೆಳೆಯುತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>