ತಾಲ್ಲೂಕಿನ ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಸುತ್ತ ಮುತ್ತ ಸುಮಾರು 800 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಕೆಐಎಡಿಬಿ ರೈತರಿಗೆ ನೋಟಿಸ್ ನೀಡುತ್ತಿದೆ. ಕೈಗಾರಿಕಾ ವಲಯ ಸ್ಥಾಪನೆಗೆ ಸರ್ಕಾರ ಸ್ವಾಧೀನ ಪಡಿಸಿಕೊಳ್ಳುತ್ತಿರುವ ಬಹುತೇಕ ಜಮೀನುಗಳು ಫಲವತ್ತಾಗಿದ್ದು ದ್ರಾಕ್ಷಿ, ತೆಂಗು ಹಾಗೂ ತರಕಾರಿ ಬೆಳೆಯಲಾಗುತ್ತಿದೆ.