ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಇಬ್ಬರ ಬೈಕ್‌ ಕಳ್ಳರ ಬಂಧನ

Last Updated 1 ಫೆಬ್ರುವರಿ 2023, 4:40 IST
ಅಕ್ಷರ ಗಾತ್ರ

ದೇವನಹಳ್ಳಿ: ಬೈಕ್ ಕಳ್ಳತನ ಸೇರಿದಂತೆ ಹಲವು ಅಪರಾಧ ಹಾಗೂ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ದೇವನಹಳ್ಳಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಲಗಿರಿಯ ಗುಂಡಂಗುರ್ಕಿ ಗ್ರಾಮದ ಶ್ರೀಧರ(23) ಮತ್ತು ಚನ್ನರಾಯಪಟ್ಟಣದ ನಿವಾಸಿ ಅರುಣಕುಮಾರ್ ಅಲಿಯಾಸ್ ಕಾಡ(30) ಬಂಧಿತ ಆರೋಪಿಗಳು. ಶ್ರೀಧರ ವಿರುದ್ಧ 13 ಅಪರಾಧ ಹಾಗೂ ಒಂದು ಕೊಲೆ ಪ್ರಕರಣಗಳು ದಾಖಲಾಗಿದ್ದರೆ, ಅರುಣಕುಮಾರ್ ಅಲಿಯಾಸ್ ಕಾಡ ವಿರುದ್ಧ 12 ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೇವನಹಳ್ಳಿ, ಯಲಹಂಕ, ಬೆಂಗಳೂರು ನಗರ, ತಮಿಳುನಾಡು ಸೇರಿದಂತೆ ಇತರ ಕಡೆಗಳಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣಗಳಲ್ಲಿ ಈ ಇಬ್ಬರು ಆರೋಪಿಗಳು ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT