ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ಕಳ್ಳರ ಬಂಧನ

Last Updated 1 ಜುಲೈ 2022, 2:18 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ತಿರುಮಲಶಟ್ಟಿಹಳ್ಳಿಯ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದು, ಅವರಿಂದ ಮೂರು ಬೈಕ್, ಎಂಟು ಮೊಬೈಲ್ ಹಾಗೂ ಚಾರ್ಜರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೊರ್ನಹಳ್ಳಿಯ ಗಣೇಶ್ ( 20) ಹಾಗೂ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಶ್ರೀಕಾಂತ್ (19) ಬಂಧಿತರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಸೌಖ್ಯ ರಸ್ತೆಯ ಪೆಟ್ರೋಲ್ ಬಂಕ್ ಪಕ್ಕದ ನೀಲಗಿರಿ ತೋಪಿನ ಬಳಿ ಇಬ್ಬರು ಅನುಮಾನಾಸ್ಪದವಾಗಿ ಬೈಕಿನ ಮೇಲೆ‌ ಕುಳಿತಿದ್ದರು. ಇದನ್ನು ಗಮನಿಸಿದ ಅಪರಾಧ ವಿಭಾಗದ ಪೊಲೀಸರು ಅವರನ್ನು ಕರೆದು ವಿಚಾರಣೆಗೆ ಮುಂದಾಗುತ್ತಿದ್ದಂತೆ ಇಬ್ಬರು ಪರಾರಿಯಾಗಲು ಯತ್ನಿಸಿದ್ದಾರೆ.

ಬೆನ್ನಟ್ಟಿ ಹಿಡಿದು ವಿಚಾರಣೆಗೆ ಒಳಪಡಿಸಿದಾಗ ವಿವಿಧೆಡೆ ಕಳ್ಳತನದ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT