ಈ ಸಂದರ್ಭದಲ್ಲಿ ಮಾತನಾಡಿದ ಎಐಯುಟಿಯುಸಿ ತಾಲ್ಲೂಕು ಕಾರ್ಯದರ್ಶಿ ಬಿ.ಮಂಜುಳಾ, ಉಪಾಧ್ಯಕ್ಷೆ ಜಿ.ಎನ್.ಭವ್ಯ, ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12 ಸಾವಿರ ವೇತನ ನೀಡುವಂತೆ ಈ ಹಿಂದೆ ಹಲವಾರು ಬಾರಿ ಮನವಿ ಮಾಡಿದ್ದರೂ ಸರ್ಕಾರ ಗಮನ ಹರಿಸಿಲ್ಲ. ಇಂದು ಬೆಂಗಳೂರಿಗೆ ತೆರಳುತ್ತಿದ್ದ ಕಾರ್ಯಕರ್ತರನ್ನು ಸಹ ತಡೆ ಹಿಡಿದಿದ್ದಾರೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹9 ಸಾವಿರ ನೀಡುವಂತೆ ಬಜೆಟ್ನಲ್ಲಿ ನಿಗದಿ ಮಾಡಲಾಗಿದೆ. ಕಾರ್ಯಕರ್ತೆಯರ ಚಟುವಟಿಕೆಗಳನ್ನು ಆನ್ಲೈನ್ ಪೋರ್ಟಲ್ನಲ್ಲಿ ದಾಖಲಿಸಲು ಇರುವ ಅಸಂಖ್ಯಾತ ಲೋಪದೋಷಗಳನ್ನು ಸರಿಪಡಿಸುವ ಹೆಸರಿನಲ್ಲಿ ಕಾಲ ವಿಳಂಬವಾಗಿ 2018 ಮತ್ತು 2019 ರ ನಡುವೆ 15 ತಿಂಗಳಲ್ಲಿ ಕಾರ್ಯಕರ್ತೆಯರಿಗೆ ಬರಬೇಕಾಗಿದ್ದ ಬಾಕಿ ಹಾಗೆಯೇ ಉಳಿದಿದೆ. ಇನ್ನು ಕೋವಿಡ್-19 ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದ್ದರೂ ಅವರಿಗೆ ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ಸಕಾಲಕ್ಕೆ ನೀಡದೇ ಭದ್ರತೆ ಇಲ್ಲವಾಗಿದೆ ಎಂದರು.