ಶಾಂತಿಪ್ರಿಯ ಅವರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಐದು ವರ್ಷಗಳ ಹಿಂದೆ ₹1 ಲಕ್ಷ ಸಾಲ ಪಡೆದಿದ್ದರು. ಇದಕ್ಕೆ ನಿಯಮಿತವಾಗಿ ಬಡ್ಡಿ ಪಾವತಿಸಿದ್ದರು. ಕೋವಿಡ್–19 ನಂತರ ಬಡ್ಡಿ ಪಾವತಿಸಿರಲಿಲ್ಲ ಎನ್ನಲಾಗಿದೆ. ಹಣ ವಸೂಲಿ ಮಾಡಲು ಬಂದ ರಾಮಕೃಷ್ಣಾರೆಡ್ಡಿ, ಇಂದಿರಮ್ಮ ಮತ್ತು ಸುನೀಲ್ ಅವರು ಶಾಂತಿಪ್ರಿಯ ಅವರ ತಂದೆ ಸುಬ್ಬಾರೆಡ್ಡಿ ಅವರನ್ನು ಕೊಠಡಿಯಲ್ಲಿ ಕೂಡಿಹಾಕಿದ್ದಾರೆ. ಬಳಿಕ ಶಾಂತಿಪ್ರಿಯ ಅವರ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಬಿಡಿಸಲು ಬಂದ ಭಾನುಪ್ರಿಯ ಅವರ ಬಟ್ಟೆ ಹರಿದು ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.