ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ಮುಖಂಡನ ಮೇಲೆ ಹಲ್ಲೆ ಪ್ರಕರಣ: ವ್ಯಕ್ತಿ ಬಂಧನ

Last Updated 20 ಜುಲೈ 2019, 14:40 IST
ಅಕ್ಷರ ಗಾತ್ರ

ವಿಜಯಪುರ: ಚನ್ನರಾಯಪಟ್ಟಣ ಹೋಬಳಿ ಚೀಮಾಚನಹಳ್ಳಿಯಲ್ಲಿ ಶುಕ್ರವಾರ ಭೂ ವಿವಾದಕ್ಕೆ ಸಂಬಂಧಿಸಿದಂತೆ ದಲಿತ ಮುಖಂಡನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಎರಡನೇ ಆರೋಪಿ ಬೈರೇಗೌಡ ಅವರನ್ನು ಬಂಧಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಬ್‌ ಇನ್‌ಸ್ಪೆಕ್ಟರ್ ನಂದೀಶ್ ತಿಳಿಸಿದರು.

ಮುಖಂಡ ನಾರಾಯಣಸ್ವಾಮಿ ಅವರನ್ನು ಮರಕ್ಕೆ ಕಟ್ಟಿ ಹಾಕಿದ ಸವರ್ಣೀಯರು ಹಲ್ಲೆ ಮಾಡಿದ್ದರೆಂದು ಆರೋಪಿಸಿ ಚನ್ನರಾಯಪಟ್ಟಣ ಪೊಲೀಸ್ ಠಾಣೆ‍ಗೆ ದೂರು ಕೊಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣಪ್ಪ, ಸುಶೀಲಮ್ಮ, ಚಂದ್ರ, ನಾರಾಯಣಸ್ವಾಮಿ, ನಂಜಪ್ಪ, ಪಾರ್ವತಮ್ಮ, ಪದ್ಮಾವತಿ, ಲೋಕೇಶ್ ಸೇರಿ ಒಟ್ಟು 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT