ವಿಜಯಪುರ: ಚನ್ನರಾಯಪಟ್ಟಣ ಹೋಬಳಿ ಚೀಮಾಚನಹಳ್ಳಿಯಲ್ಲಿ ಶುಕ್ರವಾರ ಭೂ ವಿವಾದಕ್ಕೆ ಸಂಬಂಧಿಸಿದಂತೆ ದಲಿತ ಮುಖಂಡನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಎರಡನೇ ಆರೋಪಿ ಬೈರೇಗೌಡ ಅವರನ್ನು ಬಂಧಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ನಂದೀಶ್ ತಿಳಿಸಿದರು.
ಮುಖಂಡ ನಾರಾಯಣಸ್ವಾಮಿ ಅವರನ್ನು ಮರಕ್ಕೆ ಕಟ್ಟಿ ಹಾಕಿದ ಸವರ್ಣೀಯರು ಹಲ್ಲೆ ಮಾಡಿದ್ದರೆಂದು ಆರೋಪಿಸಿ ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ಕೊಡಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣಪ್ಪ, ಸುಶೀಲಮ್ಮ, ಚಂದ್ರ, ನಾರಾಯಣಸ್ವಾಮಿ, ನಂಜಪ್ಪ, ಪಾರ್ವತಮ್ಮ, ಪದ್ಮಾವತಿ, ಲೋಕೇಶ್ ಸೇರಿ ಒಟ್ಟು 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.