ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪಿಎಸ್ಐ ಚಿಕ್ಕನರಸಿಂಹಯ್ಯ ಮಧ್ಯಪ್ರವೇಶಿಸಿ ಶಿವಕುಮಾರ್ಗೆ ಎಚ್ಚರಿಕೆ ನೀಡಿ ವೃದ್ಧೆಯ ಮೇಲೆ ಹಲ್ಲೆ ಮಾಡುತ್ತಿರುವುದು ಸರಿಯಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ಕುಪಿತನಾದ ಶಿವಕುಮಾರ್ ಪೊಲೀಸರನ್ನು ಸಹ ಅವಾಚ್ಯ ಶಬ್ಧಗಲಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ. ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಮತ್ತು ಪೊಲೀಸರ ಮೇಲೆ ನಡೆಸಿದ ಆರೋಪದ ಮೇಲೆ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶಿವಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.