<p><strong>ಹೊಸಕೋಟೆ:</strong> ‘ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟಡ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಅವರಿಗೆ ಶಾಸಕ ಶರತ್ ಬಚ್ಚೇಗೌಡ ಕೋಟಾದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಕಾರ್ಮಿಕ ಇಲಾಖೆಯ ದಿನಸಿ ಕಿಟ್ ವಿತರಿಸಲಾಗುತ್ತಿದೆ’ ಎಂದು ನಗರಸಭಾ ಸದಸ್ಯೆ ಗಾಯತ್ರಿ ವಿಜಯ್ ಕುಮಾರ್ ತಿಳಿಸಿದರು.</p>.<p>ನಗರದ ಕೋಟೆಯಲ್ಲಿ ಬುಧವಾರ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು.</p>.<p>ಈ ಭಾಗದಲ್ಲಿ ಕಟ್ಟಡ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಅವರಿಗೆ ಕಳೆದ ಎರಡು ತಿಂಗಳಿನಿಂದ ಲಾಕ್ಡೌನ್ ಪರಿಣಾಮ ಕೆಲಸವಿಲ್ಲ. ಅವರ ಬದುಕು ಕಷ್ಟಕರವಾಗಿದೆ.ಎರಡನೇ ವಾರ್ಡ್ನಲ್ಲಿ ಸುಮಾರು 400 ಮಂದಿಗೆಕಾರ್ಮಿಕ ಇಲಾಖೆ ನೀಡಿರುವ ದಿನಸಿ ಕಿಟ್ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.</p>.<p>ನಗರದ ಇತರೇ ಭಾಗಗಳಲ್ಲಿ ಮತ್ತು ತಾಲ್ಲೂಕಿನಲ್ಲಿ ಶಾಸಕ ಶರತ್ ಬಚ್ಚೇಗೌಡ, ಸಂಸದ ಬಿ.ಎನ್. ಬಚ್ಚೇಗೌಡರ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ದಿನಸಿ ಕಿಟ್ ಸೇರಿದಂತೆ ಹಲವಾರು ರೀತಿಯಲ್ಲಿ ನೆರವು ನೀಡಿದ್ದಾರೆ ಎಂದರು.</p>.<p>ಎರಡನೇ ವಾರ್ಡ್ನಲ್ಲಿ ಈಗಾಗಲೇ ಜನತೆಯ ಪರವಾಗಿ ಸಾಕಷ್ಟು ಕೆಲಸ ಮಾಡಲಾಗಿದೆ. ಸ್ವಂತ ಖರ್ಚಿನಲ್ಲಿ ಕೊಳವೆಬಾವಿ ಕೊರೆಸಿ ಬೀದಿ ನಲ್ಲಿಗಳನ್ನು ಹಾಕಿಸಿ ದಿನನಿತ್ಯ ನೀರು ಪೂರೈಕೆ ಮಾಡಲಾಗುತ್ತಿದೆ. ಸುಮಾರು ₹ 28 ಲಕ್ಷ ವೆಚ್ಚದಡಿ ಉದ್ಯಾನ ಅಭಿವೃದ್ಧಿಪಡಿಸಲಾಗುತ್ತಿದೆ. ಶೀರ್ಘವೇ, ಅದು ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ತಿಳಿಸಿದರು.</p>.<p>ಮುಖಂಡ ಬಿ.ವಿ. ಬೈರೇಗೌಡ ಮಾತನಾಡಿ, ತಾಲ್ಲೂಕಿನಲ್ಲಿ ಇತ್ತೀಚೆಗೆ ಕುಟುಂಬದ ಬಗ್ಗೆ ಮಾತನಾಡುವ ಚಾಳಿಯನ್ನು ಕೆಲವರು ಬೆಳೆಸಿಕೊಂಡು ಬರುತ್ತಿದ್ದಾರೆ. ಅದು ಉತ್ತಮ ಬೆಳವಣಿಗೆಯಲ್ಲ. ಕೊರೊನಾ ಸಂದರ್ಭದಲ್ಲಿ ಜನರ ಸೇವೆ ಮಾಡಬೇಕೇ ವಿನಾ ಅನಾವಶ್ಯಕವಾಗಿ ನಮ್ಮ ಕುಟುಂಬದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು.</p>.<p>ಕಾರ್ಮಿಕ ಇಲಾಖೆಯು ಶಾಸಕರಿಗೆ ನೀಡಿರುವ ದಿನಸಿ ಕಿಟ್ಗಳನ್ನು ನಾವೇ ವಿತರಿಸುತ್ತಿದ್ದೇವೆ. ಈ ಕಾರ್ಯವನ್ನು ನಾವು ಸ್ವಂತದ್ದು ಎಂದು ಎಲ್ಲಿಯೂ ಹೇಳಿಲ್ಲ. ಕೆಲವರು ಕಾರ್ಮಿಕ ಇಲಾಖೆಯ ಕಿಟ್ಗಳನ್ನು ಶಾಸಕರು ತಮ್ಮದೆಂದು ಹೇಳಿಕೊಂಡು ವಿತರಿಸುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಕಾರ್ಮಿಕ ಇಲಾಖೆಯಿಂದ ಬಂದಿರುವ ಕಿಟ್ಗಳನ್ನು ಹಾಗೆಯೇ ವಿತರಿಸಲಾಗುತ್ತಿದೆ ಎಂದು ಹೇಳಿದರು.</p>.<p>ಶಾಸಕರು ತಮ್ಮ ಸ್ವಂತ ಹಣದಿಂದ ದೊಡ್ಡ ಕೆರೆ ಅಂಗಳದಲ್ಲಿ ಐದು ಲಕ್ಷ ಲೀಟರ್ ಸಾರ್ಮಥ್ಯದ ನೀರಿನ ತೊಟ್ಟಿ ಕಟ್ಟಿಸಿ ಜನತೆಗೆ ಕುಡಿಯುವ ನೀರು ಪೂರೈಸುತ್ತಿದ್ದಾರೆ ಎಂದರು.</p>.<p>ಕೇಂದ್ರ ಕಾರ್ಮಿಕ ಭವಿಷ್ಯ ನಿಧಿ ಸದಸ್ಯ ವಿಜಯ್ ಕುಮಾರ್, ವೀರಶೈವ ಲಿಂಗಾಯತ ನೌಕರರ ಸಂಘದ ಅಧ್ಯಕ್ಷ ಡಿ.ಎಸ್. ರಾಜಕುಮಾರ್, ನಗರಸಭಾ ಮಾಜಿ ಸದಸ್ಯ ಮುನಿನಂಜಪ್ಪ, ವೆಂಕಟರಮಣಪ್ಪ, ಭುಜಂಗರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ‘ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟಡ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಅವರಿಗೆ ಶಾಸಕ ಶರತ್ ಬಚ್ಚೇಗೌಡ ಕೋಟಾದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಕಾರ್ಮಿಕ ಇಲಾಖೆಯ ದಿನಸಿ ಕಿಟ್ ವಿತರಿಸಲಾಗುತ್ತಿದೆ’ ಎಂದು ನಗರಸಭಾ ಸದಸ್ಯೆ ಗಾಯತ್ರಿ ವಿಜಯ್ ಕುಮಾರ್ ತಿಳಿಸಿದರು.</p>.<p>ನಗರದ ಕೋಟೆಯಲ್ಲಿ ಬುಧವಾರ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು.</p>.<p>ಈ ಭಾಗದಲ್ಲಿ ಕಟ್ಟಡ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಅವರಿಗೆ ಕಳೆದ ಎರಡು ತಿಂಗಳಿನಿಂದ ಲಾಕ್ಡೌನ್ ಪರಿಣಾಮ ಕೆಲಸವಿಲ್ಲ. ಅವರ ಬದುಕು ಕಷ್ಟಕರವಾಗಿದೆ.ಎರಡನೇ ವಾರ್ಡ್ನಲ್ಲಿ ಸುಮಾರು 400 ಮಂದಿಗೆಕಾರ್ಮಿಕ ಇಲಾಖೆ ನೀಡಿರುವ ದಿನಸಿ ಕಿಟ್ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.</p>.<p>ನಗರದ ಇತರೇ ಭಾಗಗಳಲ್ಲಿ ಮತ್ತು ತಾಲ್ಲೂಕಿನಲ್ಲಿ ಶಾಸಕ ಶರತ್ ಬಚ್ಚೇಗೌಡ, ಸಂಸದ ಬಿ.ಎನ್. ಬಚ್ಚೇಗೌಡರ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ದಿನಸಿ ಕಿಟ್ ಸೇರಿದಂತೆ ಹಲವಾರು ರೀತಿಯಲ್ಲಿ ನೆರವು ನೀಡಿದ್ದಾರೆ ಎಂದರು.</p>.<p>ಎರಡನೇ ವಾರ್ಡ್ನಲ್ಲಿ ಈಗಾಗಲೇ ಜನತೆಯ ಪರವಾಗಿ ಸಾಕಷ್ಟು ಕೆಲಸ ಮಾಡಲಾಗಿದೆ. ಸ್ವಂತ ಖರ್ಚಿನಲ್ಲಿ ಕೊಳವೆಬಾವಿ ಕೊರೆಸಿ ಬೀದಿ ನಲ್ಲಿಗಳನ್ನು ಹಾಕಿಸಿ ದಿನನಿತ್ಯ ನೀರು ಪೂರೈಕೆ ಮಾಡಲಾಗುತ್ತಿದೆ. ಸುಮಾರು ₹ 28 ಲಕ್ಷ ವೆಚ್ಚದಡಿ ಉದ್ಯಾನ ಅಭಿವೃದ್ಧಿಪಡಿಸಲಾಗುತ್ತಿದೆ. ಶೀರ್ಘವೇ, ಅದು ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ತಿಳಿಸಿದರು.</p>.<p>ಮುಖಂಡ ಬಿ.ವಿ. ಬೈರೇಗೌಡ ಮಾತನಾಡಿ, ತಾಲ್ಲೂಕಿನಲ್ಲಿ ಇತ್ತೀಚೆಗೆ ಕುಟುಂಬದ ಬಗ್ಗೆ ಮಾತನಾಡುವ ಚಾಳಿಯನ್ನು ಕೆಲವರು ಬೆಳೆಸಿಕೊಂಡು ಬರುತ್ತಿದ್ದಾರೆ. ಅದು ಉತ್ತಮ ಬೆಳವಣಿಗೆಯಲ್ಲ. ಕೊರೊನಾ ಸಂದರ್ಭದಲ್ಲಿ ಜನರ ಸೇವೆ ಮಾಡಬೇಕೇ ವಿನಾ ಅನಾವಶ್ಯಕವಾಗಿ ನಮ್ಮ ಕುಟುಂಬದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು.</p>.<p>ಕಾರ್ಮಿಕ ಇಲಾಖೆಯು ಶಾಸಕರಿಗೆ ನೀಡಿರುವ ದಿನಸಿ ಕಿಟ್ಗಳನ್ನು ನಾವೇ ವಿತರಿಸುತ್ತಿದ್ದೇವೆ. ಈ ಕಾರ್ಯವನ್ನು ನಾವು ಸ್ವಂತದ್ದು ಎಂದು ಎಲ್ಲಿಯೂ ಹೇಳಿಲ್ಲ. ಕೆಲವರು ಕಾರ್ಮಿಕ ಇಲಾಖೆಯ ಕಿಟ್ಗಳನ್ನು ಶಾಸಕರು ತಮ್ಮದೆಂದು ಹೇಳಿಕೊಂಡು ವಿತರಿಸುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಕಾರ್ಮಿಕ ಇಲಾಖೆಯಿಂದ ಬಂದಿರುವ ಕಿಟ್ಗಳನ್ನು ಹಾಗೆಯೇ ವಿತರಿಸಲಾಗುತ್ತಿದೆ ಎಂದು ಹೇಳಿದರು.</p>.<p>ಶಾಸಕರು ತಮ್ಮ ಸ್ವಂತ ಹಣದಿಂದ ದೊಡ್ಡ ಕೆರೆ ಅಂಗಳದಲ್ಲಿ ಐದು ಲಕ್ಷ ಲೀಟರ್ ಸಾರ್ಮಥ್ಯದ ನೀರಿನ ತೊಟ್ಟಿ ಕಟ್ಟಿಸಿ ಜನತೆಗೆ ಕುಡಿಯುವ ನೀರು ಪೂರೈಸುತ್ತಿದ್ದಾರೆ ಎಂದರು.</p>.<p>ಕೇಂದ್ರ ಕಾರ್ಮಿಕ ಭವಿಷ್ಯ ನಿಧಿ ಸದಸ್ಯ ವಿಜಯ್ ಕುಮಾರ್, ವೀರಶೈವ ಲಿಂಗಾಯತ ನೌಕರರ ಸಂಘದ ಅಧ್ಯಕ್ಷ ಡಿ.ಎಸ್. ರಾಜಕುಮಾರ್, ನಗರಸಭಾ ಮಾಜಿ ಸದಸ್ಯ ಮುನಿನಂಜಪ್ಪ, ವೆಂಕಟರಮಣಪ್ಪ, ಭುಜಂಗರಾವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>