ಇಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ನೆಲಮಂಗಲ ತಾಲ್ಲೂಕು ಕಾಚನಹಳ್ಳಿಯಲ್ಲಿ ಒತ್ತಾಯಪೂರ್ವಕವಾಗಿ ತಳವಾರಿಕೆ ಮಾಡಬೇಕು ಎಂದು ಒತ್ತಾಯಿಸಿ ಹಲ್ಲೆ ನಡೆಸಿದ್ದಾರೆ. ಇಂತಹ ಘಟನೆಗಳು ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಲೇ ಇದ್ದರೂ ಇದುವರೆಗೂ ದೌರ್ಜನ್ಯಕ್ಕೆ ಒಳಗಾಗಿರುವ ಒಂದು ಕುಟುಂಬಕ್ಕೂ ನ್ಯಾಯ ಸಿಕ್ಕಿಲ್ಲ. ಅಧಿಕಾರಿಗಳು ಹೋಗಿ ಶಾಂತಿ ಸಭೆಗಳು ನಡೆಸಿದ ಮಾತ್ರಕ್ಕೆ ದಲಿತರ ಮೇಲಿನ ದೌರ್ಜನ್ಯಗಳು ಕಡಿಮೆಯಾಗಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾದಾಗ ಮಾತ್ರವೇ ದೌರ್ಜನ್ಯಗಳು ಕಡಿಮೆಯಾಗುತ್ತವೆ. ಮುಖ್ಯಮಂತ್ರಿ ಗ್ರಾಮಕ್ಕೆ ಬೇಟಿ ಕೊಡಬೇಕು’ ಎಂದರು.