ಉದ್ಯೋಗ ನೀಡಲು ಆಗ್ರಹ: ಪ್ರತಿಭಟನೆ
ಆನೇಕಲ್: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಈಗ ಘೋಷಣೆ ಮಾಡಿರುವ ಪರಿಹಾರವನ್ನು ಹೆಚ್ಚಿಸಬೇಕೆಂದು ವಿಡುದಲೈ ಚಿರತೆಗಳ್ (ವಿಕೆಸಿ) ಪದಾಧಿಕಾರಿಗಳು ಸಂಘಟನೆ ಪದಾಧಿಕಾರಿಗಳು ಆಕ್ಸ್ಫರ್ಡ್ ಆಸ್ಪತ್ರೆಯ ಶವಗಾರದ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.
ಈಗಾಗಲೇ ಕರ್ನಾಟಕ ಸರ್ಕಾರ ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಹಾಗೂ ತಮಿಳುನಾಡು ಸರ್ಕಾರ ₹3 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇದು ಸಾಲದು. ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು. ಎರಡೂ ರಾಜ್ಯದಿಂದ ಮೃತರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕೆಂಬ ಪ್ರತಿಭಟನನಿರತರು ಆಗ್ರಹಿಸಿದರು.
ಅಲ್ಲದೆ ಕೇಂದ್ರ ಸರ್ಕಾರವು ₹1 ಕೋಟಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.