<p><strong>ಅತ್ತಿಬೆಲೆ (ಆನೇಕಲ್):</strong> ಪಟಾಲಮ್ಮ ದೇವಿ ಸೇವಾ ಸಮಿತಿಯಿಂದ ಅತ್ತಿಬೆಲೆಯ ಗ್ರಾಮ ದೇವತೆ ಪಟಾಲಮ್ಮ ದೇವಿ ದೇವಾಲಯ ಜೀರ್ಣೋದ್ಧಾರವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ನಡೆಯಿತು.</p>.<p>ಮೇ 25ರಿಂದಲೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬುಧವಾರ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆದರು. ಮಹಿಳೆಯರು ಭಕ್ತಿ ಗೀತಗೆಳ ಗಾಯನ, ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ ನಡೆಯಿತು.</p>.<p>ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ ಮಾತನಾಡಿ, ದೇವಾಲಯದಿಂದ ಸಮಾಜದಲ್ಲಿ ಸಾಮರಸ್ಯ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿಪಾಲ್ಗೊಳ್ಳುವುದರಿಂದ ಶಾಂತಿ ನೆಮ್ಮದಿ ಮೂಡುವ ಜೊತೆಗೆ ಒಗ್ಗಟ್ಟು ಮೂಡುತ್ತದೆ. ಮೌಲ್ಯಾಧಾರಿಯ ಚಿಂತನೆಗಳನ್ನು ಬೆಳೆಸಲು ಧಾರ್ಮಿಕ ಕಾರ್ಯಕ್ರಮಗಳು ವೇದಿಕೆಯಾಗಬೇಕು ಎಂದರು.</p>.<p>ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ, ಪಟಾಲಮ್ಮ ದೇವಿ ಸೇವಾ ಸಮಿತಿ ಅಧ್ಯಕ್ಷ ಪಟಾಪಟ್ ಶ್ರೀನಿವಾಸ್, ನಿರ್ದೇಶಕರಾದ ಜಯಚಂದ್ರ, ವೆಂಕಟೇಶ್, ಮುನಿಯಪ್ಪ, ಮಂಜುನಾಥ್, ಕೃಷ್ಣಮೂರ್ತಿ, ಕೃಷ್ಣಪ್ಪ, ಎ.ಆರ್.ಪ್ರಕಾಶ್, ರಘುನಾಥ್, ಶ್ರೀನಿವಾಸ್, ಲೋಕೇಶ್, ಉಮೇಶ್, ನರಸಿಂಹಮೂರ್ತಿ, ಮೋಹನ್ ಬಾಬು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-15-471945533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅತ್ತಿಬೆಲೆ (ಆನೇಕಲ್):</strong> ಪಟಾಲಮ್ಮ ದೇವಿ ಸೇವಾ ಸಮಿತಿಯಿಂದ ಅತ್ತಿಬೆಲೆಯ ಗ್ರಾಮ ದೇವತೆ ಪಟಾಲಮ್ಮ ದೇವಿ ದೇವಾಲಯ ಜೀರ್ಣೋದ್ಧಾರವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ನಡೆಯಿತು.</p>.<p>ಮೇ 25ರಿಂದಲೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬುಧವಾರ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆದರು. ಮಹಿಳೆಯರು ಭಕ್ತಿ ಗೀತಗೆಳ ಗಾಯನ, ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ ನಡೆಯಿತು.</p>.<p>ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ ಮಾತನಾಡಿ, ದೇವಾಲಯದಿಂದ ಸಮಾಜದಲ್ಲಿ ಸಾಮರಸ್ಯ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿಪಾಲ್ಗೊಳ್ಳುವುದರಿಂದ ಶಾಂತಿ ನೆಮ್ಮದಿ ಮೂಡುವ ಜೊತೆಗೆ ಒಗ್ಗಟ್ಟು ಮೂಡುತ್ತದೆ. ಮೌಲ್ಯಾಧಾರಿಯ ಚಿಂತನೆಗಳನ್ನು ಬೆಳೆಸಲು ಧಾರ್ಮಿಕ ಕಾರ್ಯಕ್ರಮಗಳು ವೇದಿಕೆಯಾಗಬೇಕು ಎಂದರು.</p>.<p>ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ, ಪಟಾಲಮ್ಮ ದೇವಿ ಸೇವಾ ಸಮಿತಿ ಅಧ್ಯಕ್ಷ ಪಟಾಪಟ್ ಶ್ರೀನಿವಾಸ್, ನಿರ್ದೇಶಕರಾದ ಜಯಚಂದ್ರ, ವೆಂಕಟೇಶ್, ಮುನಿಯಪ್ಪ, ಮಂಜುನಾಥ್, ಕೃಷ್ಣಮೂರ್ತಿ, ಕೃಷ್ಣಪ್ಪ, ಎ.ಆರ್.ಪ್ರಕಾಶ್, ರಘುನಾಥ್, ಶ್ರೀನಿವಾಸ್, ಲೋಕೇಶ್, ಉಮೇಶ್, ನರಸಿಂಹಮೂರ್ತಿ, ಮೋಹನ್ ಬಾಬು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-15-471945533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>