<p><strong>ಆನೇಕಲ್: </strong>ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮಸಂದ್ರದಲ್ಲಿ ಮಂಗಳವಾರ ಆಟೊ ಚಾಲಕನನ್ನು ಸೋಮವಾರ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. </p>.<p>ಜಿಗಣಿ ಸಮೀಪದ ಹಿನ್ನಕ್ಕಿಯಲ್ಲಿ ವಾಸವಾಗಿದ್ದ ಮೈಸೂರು ಜಿಲ್ಲೆ ತಲಕಾಡು ಮೂಲದ ದರ್ಶನ್ (28) ಮೃತ ಆಟೊ ಚಾಲಕ. ದರ್ಶನ್ ತನ್ನ ಅಕ್ಕ, ಭಾವನೊಂದಿಗೆ ವಾಸವಾಗಿದ್ದ.</p>.<p>ಸೋಮವಾರ ರಾತ್ರಿ ಭಾವವನ್ನು ಕೆಲಸಕ್ಕೆ ಬಿಟ್ಟು ಬೊಮ್ಮಸಂದ್ರ ಬಳಿ ಬಂದಾಗ ತಂಡವೊಂದು ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.</p>.<p>ಡಿಸಿಪಿ ಸಾರಾ ಫಾತೀಮಾ, ಎಲೆಕ್ಟ್ರಾನಿಕ್ ಸಿಟಿ ಎಸಿಪಿ ಸತೀಶ್, ಹೆಬ್ಬಗೋಡಿ ಇನ್ಸ್ಪೆಕ್ಟರ್ ಸೋಮಶೇಖರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಶ್ವಾನದಳ ಮತ್ತು ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮಸಂದ್ರದಲ್ಲಿ ಮಂಗಳವಾರ ಆಟೊ ಚಾಲಕನನ್ನು ಸೋಮವಾರ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. </p>.<p>ಜಿಗಣಿ ಸಮೀಪದ ಹಿನ್ನಕ್ಕಿಯಲ್ಲಿ ವಾಸವಾಗಿದ್ದ ಮೈಸೂರು ಜಿಲ್ಲೆ ತಲಕಾಡು ಮೂಲದ ದರ್ಶನ್ (28) ಮೃತ ಆಟೊ ಚಾಲಕ. ದರ್ಶನ್ ತನ್ನ ಅಕ್ಕ, ಭಾವನೊಂದಿಗೆ ವಾಸವಾಗಿದ್ದ.</p>.<p>ಸೋಮವಾರ ರಾತ್ರಿ ಭಾವವನ್ನು ಕೆಲಸಕ್ಕೆ ಬಿಟ್ಟು ಬೊಮ್ಮಸಂದ್ರ ಬಳಿ ಬಂದಾಗ ತಂಡವೊಂದು ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.</p>.<p>ಡಿಸಿಪಿ ಸಾರಾ ಫಾತೀಮಾ, ಎಲೆಕ್ಟ್ರಾನಿಕ್ ಸಿಟಿ ಎಸಿಪಿ ಸತೀಶ್, ಹೆಬ್ಬಗೋಡಿ ಇನ್ಸ್ಪೆಕ್ಟರ್ ಸೋಮಶೇಖರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಶ್ವಾನದಳ ಮತ್ತು ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>