<p><strong>ದೊಡ್ಡಬಳ್ಳಾಪುರ: </strong>ಇಲ್ಲಿಯ<strong> </strong>ಡಿ.ಕ್ರಾಸ್ ಬಳಿ ನಡುರಸ್ತೆಯಲ್ಲಿಯೇ ಕಳೆದ ಗುರುವಾರ ಆಟೊ ಚಾಲಕ ಪವನ್ ಎಂಬಾತನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕಾನೂನು ಸಂಘರ್ಷಕ್ಕೆ ಒಳಗಾದ ಆರೋಪಿ ಸೇರಿದಂತೆ ತಾಲ್ಲೂಕಿನ ಮಲ್ಲಾತಹಳ್ಳಿ ಗ್ರಾಮದ ಸಂದೀಪ್(32), ಸಿದ್ದೇನಾಯಕನಹಳ್ಳಿಯ ಉದಯ್ (23) ಹೇಮಂತ್ (22), ಮಂಜು (24) ಎಂಬುವರನ್ನು ಬಂಧಿಸಲಾಗಿದೆ.</p>.<p>ಪ್ರೀತಿಯ ವಿಚಾರಕ್ಕಾಗಿ ಪವನ್ ಕೊಲೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಮೂರು ದಿನ ವಶಕ್ಕೆ ಪಡೆದಿದ್ದಾರೆ.</p>.<p>ಕೊಲೆ ನಂತರ ಆರೋಪಿಗಳು ಕಾರಿನಲ್ಲಿ ಬೆಂಗಳೂರು ಹೊರವಲಯದ ಕೆ.ಆರ್.ಪುರದಲ್ಲಿ ಕಾರು ನಿಲ್ಲಿಸಿ ಹೊಸಕೋಟೆ ತಾಲ್ಲೂಕಿನ ಮೇಡಿಮಲ್ಲಸಂದ್ರ ಗ್ರಾಮದಲ್ಲಿ ಸ್ನೇಹಿತನ ಮನೆಯಲ್ಲಿ ತಲೆಮರೆಸಿಕೊಂಡಿದ್ದರು.</p>.<p>ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಮಹಿಳಾ ಠಾಣೆ ಇನ್ಸ್ಪೆಕ್ಟರ್, ಎಂ.ಬಿ. ನವೀನಕುಮಾರ್ ನೇತೃತ್ವದಲ್ಲಿ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಇಲ್ಲಿಯ<strong> </strong>ಡಿ.ಕ್ರಾಸ್ ಬಳಿ ನಡುರಸ್ತೆಯಲ್ಲಿಯೇ ಕಳೆದ ಗುರುವಾರ ಆಟೊ ಚಾಲಕ ಪವನ್ ಎಂಬಾತನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕಾನೂನು ಸಂಘರ್ಷಕ್ಕೆ ಒಳಗಾದ ಆರೋಪಿ ಸೇರಿದಂತೆ ತಾಲ್ಲೂಕಿನ ಮಲ್ಲಾತಹಳ್ಳಿ ಗ್ರಾಮದ ಸಂದೀಪ್(32), ಸಿದ್ದೇನಾಯಕನಹಳ್ಳಿಯ ಉದಯ್ (23) ಹೇಮಂತ್ (22), ಮಂಜು (24) ಎಂಬುವರನ್ನು ಬಂಧಿಸಲಾಗಿದೆ.</p>.<p>ಪ್ರೀತಿಯ ವಿಚಾರಕ್ಕಾಗಿ ಪವನ್ ಕೊಲೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಮೂರು ದಿನ ವಶಕ್ಕೆ ಪಡೆದಿದ್ದಾರೆ.</p>.<p>ಕೊಲೆ ನಂತರ ಆರೋಪಿಗಳು ಕಾರಿನಲ್ಲಿ ಬೆಂಗಳೂರು ಹೊರವಲಯದ ಕೆ.ಆರ್.ಪುರದಲ್ಲಿ ಕಾರು ನಿಲ್ಲಿಸಿ ಹೊಸಕೋಟೆ ತಾಲ್ಲೂಕಿನ ಮೇಡಿಮಲ್ಲಸಂದ್ರ ಗ್ರಾಮದಲ್ಲಿ ಸ್ನೇಹಿತನ ಮನೆಯಲ್ಲಿ ತಲೆಮರೆಸಿಕೊಂಡಿದ್ದರು.</p>.<p>ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಮಹಿಳಾ ಠಾಣೆ ಇನ್ಸ್ಪೆಕ್ಟರ್, ಎಂ.ಬಿ. ನವೀನಕುಮಾರ್ ನೇತೃತ್ವದಲ್ಲಿ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>