ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಎರಡನೇ ಶನಿವಾರದ ಪ್ರಯುಕ್ತ ಸರ್ಕಾರಿ ಕಚೇರಿಗಳಿಗೆ ರಜೆ ಇದ್ದುದರಿಂದ ಬಸ್ ನಿಲ್ದಾಣದಲ್ಲಿ ಜನಸಂದಣಿ ವಿರಳವಾಗಿತ್ತು. ಯಾವುದೇ ಸಂಭ್ರಮೋತ್ಸವ, ವಿಜಯೋತ್ಸವ ಆಚರಿಸದಂತೆ ಮೊದಲೇ ಸೂಚನೆ ನೀಡಲಾಗಿದ್ದರಿಂದ ಗುಂಪು ಸೇರುವಿಕೆಗೆ ಅವಕಾಶವಿರಲಿಲ್ಲ.