ಔಷಧಿ ಸೇವಿಸುವ ವಿಧಾನ:‘ವರ್ಷಕ್ಕೆ ಒಮ್ಮೆ ನೀಡುವ ಬಾಳೆ ಹಣ್ಣಿನ ಔಷಧ ಹುಣ್ಣಿಮೆಯಂದು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಔಷಧವನ್ನು ರಾತ್ರಿ, ತಾರಸಿಯ ಮೇಲೆ ಸೂಕ್ತ ಬಂದೋಬಸ್ತ್ನಲ್ಲಿರಿಸಬೇಕು. ಚಂದ್ರನ ಬೆಳದಿಂಗಳ ಕಿರಣಗಳು ಹಣ್ಣಿನ ಮೇಲೆ ಬೀಳುವಂತಿರಬೇಕು. ಔಷಧಿ ಸೇವಿಸುವವರಿಗೆ ಬಾಳೆಹಣ್ಣನ್ನು ಕುಟುಂಬದ ಸದಸ್ಯರು ಹಾಸಿಗೆ ಬಳಿಯೇ ತಂದು ನೀಡಬೇಕು. ಬೆಳಿಗ್ಗೆ ಹಾಸಿಗೆಯಲ್ಲಿಯೇ ಕಣ್ಣನ್ನು ತೆರೆಯದೆ ನೆಲಕ್ಕೆ ಕಾಲು ಊರದೆ, ಒಂದೇ ಬಾರಿಗೆ ತೆಗೆದುಕೊಳ್ಳಬೇಕು. ಔಷಧಕ್ಕೆ ಚಂದ್ರನ ಕಿರಣಗಳಿಂದ ಮಹತ್ವದ ಸತ್ವ ಬರುತ್ತದೆ. ಈ ವೇಳೆ ಮಾತನಾಡಬಾರದು. ಔಷಧ ಸೇವಿಸಿದ ನಂತರ ಶೀತದ ಪದಾರ್ಥಗಳನ್ನು ತಿನ್ನಬಾರದು. ವೈದ್ಯರು ನೀಡಿರುವ ಸಲಹೆಗಳನ್ನು ತಪ್ಪದೇ ಪಾಲಿಸಬೇಕು’ ಎಂದರು.