ಸರ್ಕಾರಿ ಆಯುರ್ವೇದ ಆಸ್ಪತ್ರೆ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಖುದ್ಸಿಯ ತಸ್ನೀಮ್ ಮಾತನಾಡಿ, ಅಸ್ತಮಾ, ಕೆಮ್ಮು, ಶೀತ, ಗಂಟಲು ಬೇನೆಗಳಿಗೆ ಬಾಳೆಹಣ್ಣಿನ ಆಯುರ್ವೇದ ಔಷಧಿ ಪರಿಣಾಮಕಾರಿಯಾಗಿದೆ. ಪ್ರತಿ ವರ್ಷಕ್ಕೆ ಒಮ್ಮೆ ನೀಡುವ ಬಾಳೆ ಹಣ್ಣಿನ ಔಷಧಕ್ಕೆ ಈ ಹುಣ್ಣಿಮೆಯಂದು ಮಾತ್ರ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.