<p><strong>ಹೊಸಕೋಟೆ: </strong>ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಕಾಯಿಲೆ ಬಾರದಂತೆ ಮುಂಜಾಗೃತೆವಹಿಸುವುದು ಸೂಕ್ತ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ್ ತಿಳಿಸಿದರು.</p>.<p>ನಗರದ ಆಯುಷ್ ಆಸ್ಪತ್ರೆ ವತಿಯಿಂದ ತಾಲ್ಲೂಕಿನ ಆಶಾ ಕಾರ್ಯಕರ್ತೆಯರಿಗೆ ಆಯುಷ್ ಇಮ್ಯೂನಿಟಿ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಆಯುಷ್ ವೈದ್ಯೆ ಡಾ.ನಿರ್ಮಲಾ ಮಾತನಾಡಿ, ಕೊರೊನಾ ಸೋಂಕಿನ ಹಾವಳಿ ತಡೆಯಲು ಭಾರತೀಯ ವೈದ್ಯ ಪದ್ಧತಿಯಲ್ಲಿ ಚಿಕಿತ್ಸೆಯಿದೆ. ಇದರಿಂದ ಕೊರೊನಾವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪ್ರತಿದಿನ ಸಾರ್ವಜನಿಕ ಸಂಪರ್ಕದಲ್ಲಿರುವ ಆಶಾ ಕಾರ್ಯಕರ್ತೆಯರು ಈ ಕಿಟ್ನಲ್ಲಿರುವ ಔಷಧಿ ಬಳಸುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಕೊರೊನಾ ಸೋಂಕು ತಗುಲಿದರೂ ಅದನ್ನು ಸೂಕ್ತವಾಗಿ ನಿಭಾಯಿಸುವ ಶಕ್ತಿಯನ್ನು ದೇಹಕ್ಕೆ ನೀಡುತ್ತದೆ ಎಂದು ತಿಳಿಸಿದರು.</p>.<p>ತಾಲ್ಲೂಕಿನ 234 ಆಶಾ ಕಾರ್ಯಕರ್ತೆಯರಿಗೆ ಆಯುಷ್ ಇಲಾಖೆಯಿಂದ ಕಿಟ್ ವಿತರಿಸಲಾಯಿತು.</p>.<p>ಆಯುಷ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸರಸ್ವತಿ ನಾವಳ್ಳಿ, ಆಡಳಿತಾಧಿಕಾರಿ ಸತೀಶ್, ಡಾ.ರಾಘವೇಂದ್ರ, ನರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಕಾಯಿಲೆ ಬಾರದಂತೆ ಮುಂಜಾಗೃತೆವಹಿಸುವುದು ಸೂಕ್ತ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ್ ತಿಳಿಸಿದರು.</p>.<p>ನಗರದ ಆಯುಷ್ ಆಸ್ಪತ್ರೆ ವತಿಯಿಂದ ತಾಲ್ಲೂಕಿನ ಆಶಾ ಕಾರ್ಯಕರ್ತೆಯರಿಗೆ ಆಯುಷ್ ಇಮ್ಯೂನಿಟಿ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಆಯುಷ್ ವೈದ್ಯೆ ಡಾ.ನಿರ್ಮಲಾ ಮಾತನಾಡಿ, ಕೊರೊನಾ ಸೋಂಕಿನ ಹಾವಳಿ ತಡೆಯಲು ಭಾರತೀಯ ವೈದ್ಯ ಪದ್ಧತಿಯಲ್ಲಿ ಚಿಕಿತ್ಸೆಯಿದೆ. ಇದರಿಂದ ಕೊರೊನಾವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಪ್ರತಿದಿನ ಸಾರ್ವಜನಿಕ ಸಂಪರ್ಕದಲ್ಲಿರುವ ಆಶಾ ಕಾರ್ಯಕರ್ತೆಯರು ಈ ಕಿಟ್ನಲ್ಲಿರುವ ಔಷಧಿ ಬಳಸುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಕೊರೊನಾ ಸೋಂಕು ತಗುಲಿದರೂ ಅದನ್ನು ಸೂಕ್ತವಾಗಿ ನಿಭಾಯಿಸುವ ಶಕ್ತಿಯನ್ನು ದೇಹಕ್ಕೆ ನೀಡುತ್ತದೆ ಎಂದು ತಿಳಿಸಿದರು.</p>.<p>ತಾಲ್ಲೂಕಿನ 234 ಆಶಾ ಕಾರ್ಯಕರ್ತೆಯರಿಗೆ ಆಯುಷ್ ಇಲಾಖೆಯಿಂದ ಕಿಟ್ ವಿತರಿಸಲಾಯಿತು.</p>.<p>ಆಯುಷ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸರಸ್ವತಿ ನಾವಳ್ಳಿ, ಆಡಳಿತಾಧಿಕಾರಿ ಸತೀಶ್, ಡಾ.ರಾಘವೇಂದ್ರ, ನರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>