ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಸಾಯಿಖಾನೆಗಳನ್ನು ನಡೆಸುತ್ತಿದ್ದಾರೆ. ಇದರಿಂದಾಗಿ ಕೊಳಚೆ ನೀರು ಹರಿಯಬೇಕಾಗಿರುವ ಚರಂಡಿಗಳಲ್ಲಿ ರಕ್ತ ಹರಿಯುತ್ತಿದೆ. ಇದನ್ನು ವಿರೋಧಿಸುವವರ ಮನೆಗಳ ಮುಂದೆ ರಾತ್ರಿವೇಳೆ ರಕ್ತ ತಂದು ಎರಚುವಂತಹ ಕೆಲಸ ಮಾಡುತ್ತಿದ್ದಾರೆ. ಕೆಲವು ವ್ಯಾಪಾರಿಗಳು ಹನುಮಂತಶೆಟ್ಟಿ ಎಂಬುವರಿಗೆ ಕೊಲೆ ಬೆದರಿಕೆಯನ್ನೂ ಹಾಕುತ್ತಿದ್ದಾರೆ ಎಂದು ದೂರಿದರು.