<p><strong>ದೊಡ್ಡಬಳ್ಳಾಪುರ:</strong>ಹಣ ಸುಲಿಗೆ, ಜೀವ ಬೆದರಿಕೆ, ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬಾಗೇಪಲ್ಲಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಬಾಂಬೆ ಸಲೀಂ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ ದೊಡ್ಡಬಳ್ಳಾಪುರದ ಪೊಲೀಸರ ವಶಕ್ಕೆ ಪಡೆಯಲಾಗಿದೆ ಎಂದು ಡಿವೈಎಸ್ಪಿ ಟಿ. ರಂಗಪ್ಪ ತಿಳಿಸಿದ್ದಾರೆ.</p>.<p>ಬಾಂಬೆ ಸಲೀಂ ಮೇಲೆ ದೊಡ್ಡಬಳ್ಳಾಪುರ ಉಪವಿಭಾಗದ ವಿವಿಧ ಠಾಣೆಗಳಲ್ಲಿ ಈ ಹಿಂದೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬಾಂಬೆ ಸಲೀಂನಿಂದ ವಂಚನೆ, ಹಣ ಸುಲಿಗೆ ಅಥವಾ ಜೀವ ಬೆದರಿಕೆಗೆ ಒಳಗಾದ ಸಾರ್ವಜನಿಕರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.</p>.<p>ಹೆಚ್ಚಿನ ಮಾಹಿತಿಗೆ ಮೊಬೈಲ್ 94808 02421 ಸಂಪರ್ಕಿಸಬಹುದು.</p>.<p>ಬಂಧನ: ಹರಿಯಾಣ ಮೂಲದ ಸಂಜ್ಕುಮಾರ್ ಎಂಬಾತನನ್ನು ಬಾಶೆಟ್ಟಿಹಳ್ಳಿಯಲ್ಲಿ ಇರಿದು ಕೊಲೆ ಮಾಡಿದ್ದ ಪ್ರಕರಣದಲ್ಲಿ ಕೆ.ಪಿ.ನಂದನ್ ಎಂಬಾತನನ್ನು ಬಂಧಿಸಲಾಗಿದೆ.</p>.<p>ಸ್ನೇಹಿತನಿಗೆ ಮೊಬೈಲ್ ಕೊಟ್ಟು ಸಾಲ ಪಡೆದ ಕಾರಣಕ್ಕೆ ಮೊಬೈಲ್ನಲ್ಲಿ ಸಂಗ್ರಹವಾಗಿದ್ದ ಫೋಟೊದಲ್ಲಿನ ಹುಡುಗಿಯೊಂದಿಗೆ ವಿವಾಹ ಮಾಡಿಸು ಎಂದು ಕೆಟ್ಟದಾಗಿ ಮಾತನಾಡುತ್ತ, ದಿನವು ಪೀಡಿಸುತ್ತಿದ್ದ. ಹಾಗಾಗಿ, ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದುಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ. ನವೀನ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong>ಹಣ ಸುಲಿಗೆ, ಜೀವ ಬೆದರಿಕೆ, ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಬಾಗೇಪಲ್ಲಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಬಾಂಬೆ ಸಲೀಂ ಎಂಬಾತನನ್ನು ಹೆಚ್ಚಿನ ವಿಚಾರಣೆಗಾಗಿ ದೊಡ್ಡಬಳ್ಳಾಪುರದ ಪೊಲೀಸರ ವಶಕ್ಕೆ ಪಡೆಯಲಾಗಿದೆ ಎಂದು ಡಿವೈಎಸ್ಪಿ ಟಿ. ರಂಗಪ್ಪ ತಿಳಿಸಿದ್ದಾರೆ.</p>.<p>ಬಾಂಬೆ ಸಲೀಂ ಮೇಲೆ ದೊಡ್ಡಬಳ್ಳಾಪುರ ಉಪವಿಭಾಗದ ವಿವಿಧ ಠಾಣೆಗಳಲ್ಲಿ ಈ ಹಿಂದೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಬಾಂಬೆ ಸಲೀಂನಿಂದ ವಂಚನೆ, ಹಣ ಸುಲಿಗೆ ಅಥವಾ ಜೀವ ಬೆದರಿಕೆಗೆ ಒಳಗಾದ ಸಾರ್ವಜನಿಕರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರೆ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.</p>.<p>ಹೆಚ್ಚಿನ ಮಾಹಿತಿಗೆ ಮೊಬೈಲ್ 94808 02421 ಸಂಪರ್ಕಿಸಬಹುದು.</p>.<p>ಬಂಧನ: ಹರಿಯಾಣ ಮೂಲದ ಸಂಜ್ಕುಮಾರ್ ಎಂಬಾತನನ್ನು ಬಾಶೆಟ್ಟಿಹಳ್ಳಿಯಲ್ಲಿ ಇರಿದು ಕೊಲೆ ಮಾಡಿದ್ದ ಪ್ರಕರಣದಲ್ಲಿ ಕೆ.ಪಿ.ನಂದನ್ ಎಂಬಾತನನ್ನು ಬಂಧಿಸಲಾಗಿದೆ.</p>.<p>ಸ್ನೇಹಿತನಿಗೆ ಮೊಬೈಲ್ ಕೊಟ್ಟು ಸಾಲ ಪಡೆದ ಕಾರಣಕ್ಕೆ ಮೊಬೈಲ್ನಲ್ಲಿ ಸಂಗ್ರಹವಾಗಿದ್ದ ಫೋಟೊದಲ್ಲಿನ ಹುಡುಗಿಯೊಂದಿಗೆ ವಿವಾಹ ಮಾಡಿಸು ಎಂದು ಕೆಟ್ಟದಾಗಿ ಮಾತನಾಡುತ್ತ, ದಿನವು ಪೀಡಿಸುತ್ತಿದ್ದ. ಹಾಗಾಗಿ, ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದುಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ. ನವೀನ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>