<p><strong>ಹೊಸಕೋಟೆ</strong>: ತಾಲ್ಲೂಕಿನ ಜಡಗೇನಹಳ್ಳಿ ಹೋಬಳಿಯ ಖಾಜಿ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮನಬಂಡೆ ಗ್ರಾಮದ ಬಳಿ ಬೆಂಗಳೂರಿನ ಕಸ ಮತ್ತು ಆಸ್ಪತ್ರೆಗಳ ತ್ಯಾಜ್ಯ ಸುರಿಯಲಾಗುತ್ತಿದೆ.</p>.<p>ಬಿಬಿಎಂಪಿ ತಂದು ಸುರಿಯುತ್ತಿರುವ ಕಸ ಮತ್ತು ಆಸ್ಪತ್ರೆ ತ್ಯಾಜ್ಯಕ್ಕೆ ಬೆಂಕಿ ಹಚ್ಚುತ್ತಿರುವುದರಿಂದ ಗ್ರಾಮಸ್ಥರಿಗೆ ಆರೋಗ್ಯ ಸಮಸ್ಯೆಯಾಗುತ್ತದೆ ಎಂದು ಬೊಮ್ಮನಬಂಡೆ ಗ್ರಾಮಸ್ಥರು ಆರೋಪಿಸಿದ್ದಾರೆ.<br><br> ಬೊಮ್ಮನಬಂಡೆ ಹೊರವಲಯದಲ್ಲಿ ಕಸ ಹಾಗೂ ಸಿರಿಂಜ್, ಗ್ಲೌಸ್, ಅವಧಿ ಮೀರಿದ ಔಷಧಿ ಸೇರಿದಂತೆ ಇನ್ನಿತರ ಆಸ್ಪತ್ರೆ ತ್ಯಾಜ್ಯ ಸುರಿದು ಬೆಂಕಿ ಇಡಲಾಗುತ್ತಿದೆ. ಇದರಿಂದ ದಟ್ಟ ಹೊಗೆ ಆವರಿಸಿ ಉಸಿರಾಡುವ ಗಾಳಿ ಸೇರುತ್ತಿದೆ. ಜನರ ಆರೋಗ್ಯ ಸಮಸ್ಯೆ ಹದಗೆಡುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. <br><br> ಕಟ್ಟಿಗೇನಹಳ್ಳಿ-ಬೊಮ್ಮನಬಂಡೆ ನಡುವಿನ ಜಮೀನಿನಲ್ಲಿ ಬಿಬಿಎಂಪಿ ವ್ಯಾಪ್ತಿಯಿಂದ ಲೋಡ್ಗಟ್ಟಲೇ ವೈದ್ಯಕೀಯ ತ್ಯಾಜ್ಯ ಸೇರಿಂತೆ ಇತರೆ ಕಸದ ರಾಶಿ ತಂದು ಸುರಿಯಲಾಗುತ್ತಿದೆ. ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿ ವಾಹನ ಸಮೇತ ಹಿಡಿದುಕೊಟ್ಟರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಕಟ್ಟಿಗೇನಹಳ್ಳಿ ಮತ್ತು ಬೊಮ್ಮನಬಂಡಿ ಗ್ರಾಮಸ್ಥರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ತಾಲ್ಲೂಕಿನ ಜಡಗೇನಹಳ್ಳಿ ಹೋಬಳಿಯ ಖಾಜಿ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮನಬಂಡೆ ಗ್ರಾಮದ ಬಳಿ ಬೆಂಗಳೂರಿನ ಕಸ ಮತ್ತು ಆಸ್ಪತ್ರೆಗಳ ತ್ಯಾಜ್ಯ ಸುರಿಯಲಾಗುತ್ತಿದೆ.</p>.<p>ಬಿಬಿಎಂಪಿ ತಂದು ಸುರಿಯುತ್ತಿರುವ ಕಸ ಮತ್ತು ಆಸ್ಪತ್ರೆ ತ್ಯಾಜ್ಯಕ್ಕೆ ಬೆಂಕಿ ಹಚ್ಚುತ್ತಿರುವುದರಿಂದ ಗ್ರಾಮಸ್ಥರಿಗೆ ಆರೋಗ್ಯ ಸಮಸ್ಯೆಯಾಗುತ್ತದೆ ಎಂದು ಬೊಮ್ಮನಬಂಡೆ ಗ್ರಾಮಸ್ಥರು ಆರೋಪಿಸಿದ್ದಾರೆ.<br><br> ಬೊಮ್ಮನಬಂಡೆ ಹೊರವಲಯದಲ್ಲಿ ಕಸ ಹಾಗೂ ಸಿರಿಂಜ್, ಗ್ಲೌಸ್, ಅವಧಿ ಮೀರಿದ ಔಷಧಿ ಸೇರಿದಂತೆ ಇನ್ನಿತರ ಆಸ್ಪತ್ರೆ ತ್ಯಾಜ್ಯ ಸುರಿದು ಬೆಂಕಿ ಇಡಲಾಗುತ್ತಿದೆ. ಇದರಿಂದ ದಟ್ಟ ಹೊಗೆ ಆವರಿಸಿ ಉಸಿರಾಡುವ ಗಾಳಿ ಸೇರುತ್ತಿದೆ. ಜನರ ಆರೋಗ್ಯ ಸಮಸ್ಯೆ ಹದಗೆಡುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. <br><br> ಕಟ್ಟಿಗೇನಹಳ್ಳಿ-ಬೊಮ್ಮನಬಂಡೆ ನಡುವಿನ ಜಮೀನಿನಲ್ಲಿ ಬಿಬಿಎಂಪಿ ವ್ಯಾಪ್ತಿಯಿಂದ ಲೋಡ್ಗಟ್ಟಲೇ ವೈದ್ಯಕೀಯ ತ್ಯಾಜ್ಯ ಸೇರಿಂತೆ ಇತರೆ ಕಸದ ರಾಶಿ ತಂದು ಸುರಿಯಲಾಗುತ್ತಿದೆ. ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿ ವಾಹನ ಸಮೇತ ಹಿಡಿದುಕೊಟ್ಟರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಕಟ್ಟಿಗೇನಹಳ್ಳಿ ಮತ್ತು ಬೊಮ್ಮನಬಂಡಿ ಗ್ರಾಮಸ್ಥರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>