ಲಾಕ್ಡೌನ್ ಸಡಿಲಗೊಂಡಿರುವುದರಿಂದ ಯಥಾಸ್ಥಿತಿ ವಹಿವಾಟಿನಲ್ಲಿ ಸಾರ್ವಜನಿಕರು ತೊಡಗಿಸಿಕೊಂಡಿದ್ದಾರೆ. ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಕೆಲವರು ಅಂತರ ಕಾಯ್ದುಕೊಳ್ಳತ್ತಿಲ್ಲ. ಮಾಸ್ಕ್ ಬಗ್ಗೆಯೂ ನಿರ್ಲಕ್ಷ್ಯವೆಂದರೆ ಹೇಗೆ? ಆರೋಗ್ಯ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿ. ಸ್ಥಳೀಯವಾಗಿ ಯಾರಲ್ಲಿಯೂ ಸೋಂಕು ಕಂಡುಬಂದಿಲ್ಲ. ಇದೇ ರೀತಿ ಮುಂದುವರಿಯಬೇಕು ಎಂಬುದು ನಮ್ಮ ಅಭಿಪ್ರಾಯ. ದಿನನಿತ್ಯ ಮನೆ ಬಾಗಿಲಿಗೆ ಬರುವ ಪೌರ ಕಾರ್ಮಿಕರಿಗೆ ಸಕಾಲದಲ್ಲಿ ಕಸದ ತ್ಯಾಜ್ಯ ನೀಡಿ ಸ್ವಚ್ಛತೆಗೆ ಸಹಕರಿಸಬೇಕು. ಇಡಿ ನಗರವನ್ನು ಅಗ್ನಿಶಾಮಕ ದಳದ ವತಿಯಿಂದ ಕ್ರಿಮಿನಾಶಕ ಸಿಂಪಡಣೆ ಮಾಡಲಾಗುತ್ತಿದೆ’ ಎಂದು ಹೇಳಿದರು.