ಬೆಂಗಳೂರು ವೈದ್ಯಕೀಯ ಕಾಲೇಜಿನ ಸಮುದಾಯ ಔಷಧ ವಿಭಾಗದ ಮುಖ್ಯಸ್ಥರಾದ ಡಾ.ರಂಗನಾಥ್ ಅವರನ್ನು ಒಳಗೊಂಡ ಐವರು ತಜ್ಞ ವೈದ್ಯರ ತಂಡವು ಹೊಸಕೋಟೆ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಫಿವರ್ ಕ್ಲಿನಿಕ್ಗೆ, ಚಿಕ್ಕಕೊರಟಿ ಗ್ರಾಮದ ಕಂಟೈನ್ಮೆಂಟ್ ವಲಯ, ನಂದಗುಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸೋಂಕು ಹರಡದಂತೆ ತೆಗೆದುಕೊಂಡ ಮುಂಜಾಗ್ರತೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿತು.