ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2,037 ಜಾನುವಾರುಗಳಿಗೆ ಚರ್ಮಗಂಟು ರೋಗದ ಲಕ್ಷಣ ಕಂಡು ಬಂದಿದೆ. 154 ಜಾನುವಾರು ಮರಣ ಹೊಂದಿವೆ. ಜಿಲ್ಲೆಯಲ್ಲಿ ಒಟ್ಟು 1,62,980 ದನಗಳು ಮತ್ತು ಎಮ್ಮೆಗಳಿವೆ. ಮುಂಜಾಗ್ರತಾ ಕ್ರಮವಾಗಿ 1,51,526 ಜಾನುವಾರುಗಳಿಗೆ ಲಸಿಕೆ ಹಾಕಿಸಲಾಗಿದೆ. ಡಿಸೆಂಬರ್ ಮತ್ತು ಜನವರಿಯಲ್ಲಿ ಜಿಲ್ಲೆಯ ವಿವಿಧ ಕಡೇ ದನಗಳ ಜಾತ್ರೆ ನಡೆಯುತ್ತದೆ. ದನಗಳ ಸಾಗಾಣಿಕೆಯಿಂದ ದನಗಳು ಒಂದೆಡೆ ಸೇರುವುದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚು. ಚರ್ಮಗಂಟು ರೋಗ ನಿಯಂತ್ರಣ ಹಿನ್ನೆಲೆಯಲ್ಲಿ ಕರ್ನಾಟಕ ಅನಿಮಲ್ ಡಿಸ್ಸಿಸ್ 1961ರ ಕಾಯ್ದೆ ದನಗಳ ಜಾತ್ರೆಗೆ ನಿಷೇಧ ಮಾಡಲಾಗಿದೆ. ಚರ್ಮಗಂಟು ರೋಗವನ್ನು ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಜನವರಿ 30ವರೆಗೆ ಜಿಲ್ಲೆಯಲ್ಲಿ ಜಾನುವಾರುಗಳ ಜಾತ್ರೆ ಮತ್ತು ಜಾನವಾರುಗಳ ಸಾಗಾಣಿಕೆ ಮಾಡದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.