ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಗೋಪಾಲ್ನಾಯಕ್, ‘ರಾಜ್ಯ ಉಪಾಧ್ಯಕ್ಷ ರಾಮಾನಾಯಕ್, ‘ಪರಿಶಿಷ್ಟ ಜಾತಿ ಪಟ್ಟಿಯಿಂದ ಈ ನಾಲ್ಕು ಸಮುದಾಯಗಳನ್ನು ಕೈಬಿಡುವ ಸುದ್ದಿ ಹರಡಿದೆ. ಇಂತಹ ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಜಾತಿಯ ಪಟ್ಟಿಯಿಂದ ಕೈಬಿಡುವ ಯಾವುದೇ ಸಾಹಸದ ಕೆಲಸಕ್ಕೆ ಮುಂದಾಗದಂತೆ ಒತ್ತಡ ಹೇರುವ ಉದ್ದೇಶದಿಂದ ಚಳವಳಿ ನಡೆಸಲಾಗುತ್ತಿದೆ. ಇಡೀ ರಾಜ್ಯದಲ್ಲಿ ಬುಧವಾರ ಲಂಬಾಣಿ, ಬೋವಿ, ಕೊರಮ, ಕೊರಚ ಸಮುದಾಯದ ವತಿಯಿಂದ ಪತ್ರ ಚಳವಳಿ ನಡೆಸುವ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಸರ್ಕಾರ ನಮ್ಮ ಸಮುದಾಯವನ್ನು ಪಟ್ಟಿಯಿಂದ ಕೈಬಿಡಲು ಮುಂದಾದರೆ ತೀವ್ರ ಪ್ರತಿಭಟನೆಗೆ ಸಜ್ಜಾಗುತ್ತೇವೆ’ ಎಂದರು.