<p><strong>ಸೂಲಿಬೆಲೆ: </strong>ಎಸ್ಸೆಸ್ಸಲ್ಸಿ ವಿಷಯಗಳ ಪ್ರತ್ಯೇಕ ಆನ್ಲೈನ್ ಪರೀಕ್ಷೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂನ್ 8ರಿಂದ ಪ್ರಾರಂಭಿಸಲಾಗಿದೆ. ಆದರೆ, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆನ್ಲೈನ್ ಸಿದ್ಧತಾ ಪರೀಕ್ಷೆ ಭೂತವಾಗಿ ಕಾಡುತ್ತಿದೆ.</p>.<p>ಆನ್ಲೈನ್ ಕಲಿಕೆ ಬಗ್ಗೆ ಮೂಲಸೌಕರ್ಯ, ತಂತ್ರಜ್ಞಾನ ಹಾಗೂ ಸಂಪನ್ಮೂಲಗಳ ಲಭ್ಯತೆಗೆ ಸಂಬಂಧಪಟ್ಟಂತೆ ಪರ ವಿರೋಧ ಚರ್ಚೆ ನಡೆಯುತ್ತಿದೆ. ಮತ್ತೊಂದಡೆ ಕೊರೊನಾ ಸಂಕಷ್ಟದಲ್ಲಿ ಆನ್ಲೈನ್ ಕಲಿಕೆ ಅನಿವಾರ್ಯ ಎಂದು ಇಲಾಖೆ ಆದೇಶ ಹೊರಡಿಸಿದೆ. ಸಿದ್ಧತಾ ಪರೀಕ್ಷೆಯಲ್ಲಿ ಶೇ39.9ರಷ್ಟು ವಿದ್ಯಾರ್ಥಿಗಳು ಮಾತ್ರಭಾಗವಹಿಸಿದ್ದಾರೆ.</p>.<p>ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಆನ್ ಲೈನ್ ಲಿಂಕ್ ವಿದ್ಯಾರ್ಥಿಗಳ ವಾಟ್ಸ್ಆ್ಯಪ್ಗೆ ಕಳುಸಲಾಗಿದೆ. ಈ ಲಿಂಕ್ ಬಳಸಿ ವಿದ್ಯಾರ್ಥಿಗಳು ತಮ್ಮ ಮಾಹಿತಿ ತುಂಬಿ ನಂತರ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ. ಆದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ನೆಟ್ವರ್ಕ್ ಸಮಸ್ಯೆ, ಸುಧಾರಿತ ತಂತ್ರಜ್ಞಾನದ ಮೊಬೈಲ್ಗಳು ಇಲ್ಲದಿರುವುದು ಅಡ್ಡಿಯಾಗಿದೆ.</p>.<p>ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 13,252 ವಿದ್ಯಾರ್ಥಿಗಳಲ್ಲಿ ಕೇವಲ 5,289 ವಿದ್ಯಾರ್ಥಿಗಳು ಮಾತ್ರ ‘ಆನ್ ಲೈನ್’ ಪರೀಕ್ಷೆಗೆ ಹಾಜರಾಗಿದ್ದಾರೆ.ಇದರಲ್ಲಿ ಹೆಚ್ಚು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳು ಶೇ 63.66 ಇದ್ದಾರೆ.</p>.<p>ಕನ್ನಡ ಮಾಧ್ಯಮ ಶೇ 35.83 ಹಾಗೂ ಉರ್ದು ಮಾಧ್ಯಮ 0.51 ವಿದ್ಯಾರ್ಥಿಗಳಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಆನ್ ಲೈನ್ ಕಲಿಕೆ ಗಗನ ಕುಸುಮವಾಗಿದ್ದು, ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.</p>.<p class="Subhead"><strong>ಕಡ್ಡಾಯ ಆತಂಕ:</strong>ಸಿದ್ಧತಾ ಪರೀಕ್ಷೆ ಕಡ್ಡಾಯವಾಗಿದ್ದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೂಲಿಬೆಲೆ: </strong>ಎಸ್ಸೆಸ್ಸಲ್ಸಿ ವಿಷಯಗಳ ಪ್ರತ್ಯೇಕ ಆನ್ಲೈನ್ ಪರೀಕ್ಷೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂನ್ 8ರಿಂದ ಪ್ರಾರಂಭಿಸಲಾಗಿದೆ. ಆದರೆ, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆನ್ಲೈನ್ ಸಿದ್ಧತಾ ಪರೀಕ್ಷೆ ಭೂತವಾಗಿ ಕಾಡುತ್ತಿದೆ.</p>.<p>ಆನ್ಲೈನ್ ಕಲಿಕೆ ಬಗ್ಗೆ ಮೂಲಸೌಕರ್ಯ, ತಂತ್ರಜ್ಞಾನ ಹಾಗೂ ಸಂಪನ್ಮೂಲಗಳ ಲಭ್ಯತೆಗೆ ಸಂಬಂಧಪಟ್ಟಂತೆ ಪರ ವಿರೋಧ ಚರ್ಚೆ ನಡೆಯುತ್ತಿದೆ. ಮತ್ತೊಂದಡೆ ಕೊರೊನಾ ಸಂಕಷ್ಟದಲ್ಲಿ ಆನ್ಲೈನ್ ಕಲಿಕೆ ಅನಿವಾರ್ಯ ಎಂದು ಇಲಾಖೆ ಆದೇಶ ಹೊರಡಿಸಿದೆ. ಸಿದ್ಧತಾ ಪರೀಕ್ಷೆಯಲ್ಲಿ ಶೇ39.9ರಷ್ಟು ವಿದ್ಯಾರ್ಥಿಗಳು ಮಾತ್ರಭಾಗವಹಿಸಿದ್ದಾರೆ.</p>.<p>ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಆನ್ ಲೈನ್ ಲಿಂಕ್ ವಿದ್ಯಾರ್ಥಿಗಳ ವಾಟ್ಸ್ಆ್ಯಪ್ಗೆ ಕಳುಸಲಾಗಿದೆ. ಈ ಲಿಂಕ್ ಬಳಸಿ ವಿದ್ಯಾರ್ಥಿಗಳು ತಮ್ಮ ಮಾಹಿತಿ ತುಂಬಿ ನಂತರ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ. ಆದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ನೆಟ್ವರ್ಕ್ ಸಮಸ್ಯೆ, ಸುಧಾರಿತ ತಂತ್ರಜ್ಞಾನದ ಮೊಬೈಲ್ಗಳು ಇಲ್ಲದಿರುವುದು ಅಡ್ಡಿಯಾಗಿದೆ.</p>.<p>ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 13,252 ವಿದ್ಯಾರ್ಥಿಗಳಲ್ಲಿ ಕೇವಲ 5,289 ವಿದ್ಯಾರ್ಥಿಗಳು ಮಾತ್ರ ‘ಆನ್ ಲೈನ್’ ಪರೀಕ್ಷೆಗೆ ಹಾಜರಾಗಿದ್ದಾರೆ.ಇದರಲ್ಲಿ ಹೆಚ್ಚು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳು ಶೇ 63.66 ಇದ್ದಾರೆ.</p>.<p>ಕನ್ನಡ ಮಾಧ್ಯಮ ಶೇ 35.83 ಹಾಗೂ ಉರ್ದು ಮಾಧ್ಯಮ 0.51 ವಿದ್ಯಾರ್ಥಿಗಳಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಆನ್ ಲೈನ್ ಕಲಿಕೆ ಗಗನ ಕುಸುಮವಾಗಿದ್ದು, ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.</p>.<p class="Subhead"><strong>ಕಡ್ಡಾಯ ಆತಂಕ:</strong>ಸಿದ್ಧತಾ ಪರೀಕ್ಷೆ ಕಡ್ಡಾಯವಾಗಿದ್ದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಮೂಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>