ಬೆಂಗಳೂರು ವೈದ್ಯಕೀಯ ಕಾಲೇಜಿನ ಸಮುದಾಯ ಔಷಧಿ ವಿಭಾಗದ ಮುಖ್ಯಸ್ಥ ಡಾ.ರಂಗನಾಥ್ ಅವರನ್ನು ಒಳಗೊಂಡ ಐದು ತಜ್ಞ ವೈದ್ಯರ ತಂಡ ತಾಲ್ಲೂಕಿನ ಬಚ್ಚಹಳ್ಳಿಯಲ್ಲಿ ಇರುವ ಮೊರಾರ್ಜಿ ದೇಸಾಯಿ ವಿದ್ಯಾರ್ಥಿನಿಲಯದ ಕ್ವಾರಂಟೈನ್ ಕೇಂದ್ರ ಹಾಗೂ ಇಸ್ತೂರು ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಕ್ವಾರಂಟೈನ್ ಕೇಂದ್ರ, ನಗರದ ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಫೀವರ್ ಕ್ಲಿನಿಕ್ನಲ್ಲಿ ಆರೋಗ್ಯ ತಪಾಸಣಾ ವ್ಯವಸ್ಥೆಯನ್ನು ಪರಿಶೀಲಿಸಿತು.