ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮೂರು ತಿಂಗಳಿನಿಂದ ಲಾಕ್ ಡೌನ್ ಆಗಿದ್ದು, ಬಡವರು, ಕೃಷಿಕರು, ಕೂಲಿ ಕಾರ್ಮಿಕರು ಕೆಲಸಗಳಿಲ್ಲದೆ ಕುಟುಂಬಗಳ ನಿರ್ವಹಣೆಗೂ ಪರದಾಡುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ದಾಖಲಾತಿಯ ಶುಲ್ಕ ಕಟ್ಟುವುದು ಕೂಡಾ ಕಷ್ಟದ ಪರಿಸ್ಥಿತಿಯಾಗಿದೆ. ಕೆಲ ಶಾಲೆಗಳಲ್ಲಿ ಆನ್ಲೈನ್ ತರಗತಿಗಳನ್ನು ಆರಂಭಿಸಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಈ ವಿಧಾನದಿಂದ ಯಾವುದೇ ಪ್ರಯೋಜನವಿಲ್ಲದಿದ್ದರೂ ಶುಲ್ಕ ವಸೂಲಿ ಮಾಡಲು ತರಗತಿ ಆರಂಭಿಸಲಾಗಿದೆ. ಇಂತಹ ವಿಧಾನಗಳ ಕುರಿತು ಸ್ಥಳೀಯ ಅಧಿಕಾರಿಗಳು ಗಮನಹರಿಸಬೇಕು. ದುಬಾರಿ ಶುಲ್ಕ ವಸೂಲಿ ಮಾಡಿಕೊಳ್ಳುವ ಶಾಲೆಗಳಿಗೆ ನಿರ್ದೇಶನ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.