<p><strong>ಆನೇಕಲ್: ‘</strong>ಗ್ರಾಮೀಣ ಭಾಗದ ರೈತರ ಮಕ್ಕಳು ಪ್ರತಿಭಾವಂತರಾಗಿದ್ದಾರೆ. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಸಾಧನೆ ಮಾಡಬೇಕು’ ಎಂದು ಬಮುಲ್ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.</p>.<p>ಅವರು ಪಟ್ಟಣದಲ್ಲಿ ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 2019-20ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಸರ್ಕಾರಿ ಕೆಲಸಗಳನ್ನೇ ನಂಬಿಕೊಳ್ಳದೇ ವಿವಿಧ ಕ್ಷೇತ್ರಗಳಲ್ಲಿ ಕೌಶಲವನ್ನು ಬೆಳೆಸಿಕೊಂಡು ಪರ್ಯಾಯ ಉದ್ಯೋಗಗಳನ್ನು ಪಡೆಯುವ ದಿಸೆಯಲ್ಲಿ ಮುನ್ನುಗ್ಗಬೇಕು. ವೈಜ್ಞಾನಿಕ ಕೃಷಿ ಮತ್ತು ಹೈನುಗಾರಿಕೆಯನ್ನು ಪ್ರವೃತ್ತಿಯಾಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಲು ಅವಕಾಶಗಳಿವೆ’ ಎಂದರು.</p>.<p>‘ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ನೀಡುವ ಪ್ರತಿಭಾ ಪುರಸ್ಕಾರ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ರೈತ ಮಕ್ಕಳು ಸಹ ಇಂಜಿನಿಯರ್, ಡಾಕ್ಟರ್ಗಳಾಗಲು ಅವಕಾಶಗಳಿವೆ. ಸಾಧನೆ ಸಾಧಕನ ಸ್ವತ್ತೇ ವಿನಃ ಸೋಮಾರಿಯ ಸ್ವತ್ತಲ್ಲ. ಹಾಗಾಗಿ ವಿದ್ಯಾರ್ಥಿಗಳು ಶ್ರಮ ವಹಿಸಿ ಉನ್ನತ ಸಾಧನೆ ಮಾಡಬೇಕು’ ಎಂದರು.</p>.<p>‘ಕೊರೊನಾ ಲಾಕ್ಡೌನ್ನಿಂದಾಗಿ ಬಮೂಲ್ ಸಂಕಷ್ಟದಲ್ಲಿದ್ದರೂ ರೈತರ ಪರವಾಗಿ ನಿಲ್ಲುವ ರೈತರ ಒಕ್ಕೂಟವಾಗಿದೆ. ಬಮೂಲ್ ಸಂಸ್ಥೆ ವತಿಯಿಂದ ಚೀಸ್ ಮತ್ತು 90 ದಿನಗಳು ಬಳಕೆ ಮಾಡುವಂತಹ ತೃಪ್ತಿ ಹಾಲು ಸೇರಿದಂತೆ ವಿವಿಧ ನೂತನ ಉತ್ಪನ್ನಗಳನ್ನು ತಯಾರಿಸಲು ಚಿಂತನೆ ಮಾಡಲಾಗಿದೆ. ಬೇರೆ ಬೇರೆ ರಾಜ್ಯಗಳ ಗೀರ್ ಸೇರಿದಂತೆ ವಿವಿಧ ತಳಿಗಳ ಹಸುಗಳನ್ನು ರಾಜ್ಯದ ರೈತರಿಗೆ ನೀಡಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ’ ಎಂದರು.</p>.<p>ಬಮೂಲ್ ನಿರ್ದೇಶಕ ಬಿ.ಜಿ.ಆಂಜಿನಪ್ಪ ಮಾತನಾಡಿ, ‘ಕೊರೊನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಹಲವು ರೈತರಿಗೆ ಶಾಲಾ ಶುಲ್ಕ ಕಟ್ಟಲು ಸಮಸ್ಯೆಯಿದೆ. ಹೈನುಗಾರಿಕೆ ಮತ್ತು ಸಹಕಾರ ಸಂಘಗಳ ಬಟವಾಡೆಯನ್ನೇ ನಂಬಿರುವ ರೈತರಿಗೆ ಪ್ರತಿಭಾ ಪುರಸ್ಕಾರದ ಪ್ರೋತ್ಸಾಹಧನ ನೆರವಾಗಲಿದೆ’ ಎಂದರು.</p>.<p>‘ಐಎಎಸ್ ಮತ್ತು ಕೆಎಎಸ್ ತರಬೇತಿ ಪಡೆಯುವ ಹಾಲು ಉತ್ಪಾದಕ ಸಹಕಾರ ಸಂಘಗಳ ಸದಸ್ಯರ ಮಕ್ಕಳಿಗೆ ಬಮೂಲ್ ವತಿಯಿಂದ ₹ 50 ಸಾವಿರ, ಐಟಿಐ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ₹ 10 ಸಾವಿರ ನೆರವು ನೀಡಲಾಗುತ್ತಿದೆ. ಆದರೆ ಈ ವಿಭಾಗದಲ್ಲಿ ಅರ್ಜಿಗಳೇ ಸಲ್ಲಿಕೆಯಾಗುತ್ತಿಲ್ಲ. ಹಾಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.</p>.<p>ಆನೇಕಲ್ ಶೀಥಲ ಕೇಂದ್ರದ ಉಪ ವ್ಯವಸ್ಥಾಪಕ ಡಾ.ಮೋಹನ್ಕುಮಾರ್ ಮಾತನಾಡಿ, ‘ಆನೇಕಲ್ ತಾಲ್ಲೂಕಿನ 300 ಮಂದಿ ವಿದ್ಯಾರ್ಥಿಗಳಿಗೆ ಒಟ್ಟು ₹ 10 ಲಕ್ಷಗಳ ಪ್ರೋತ್ಸಾಹಧನ ಚೆಕ್ಗಳನ್ನು ವಿತರಿಸಲಾಗಿದೆ. ರೈತರಿಗೆ ಹಲವಾರು ಪ್ರೋತ್ಸಾಹ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಹಾಲು ಕರೆಯುವ ಯಂತ್ರದ ಬೆಲೆ 46 ಸಾವಿರ ರೂಗಳಿದೆ. ಆದರೆ ಸಬ್ಸಿಡಿ ದರದಲ್ಲಿ 23 ಸಾವಿರ ರೂಗಳಿಗೆ ಯಂತ್ರ ನೀಡಲಾಗುತ್ತದೆ. ಮ್ಯಾಟ್, ಹುಲ್ಲು ಕತ್ತರಿಸುವ ಯಂತ್ರ ಸೇರಿದಂತೆ ಅಗತ್ಯ ಪರಿಕರಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ’ ಎಂದರು.</p>.<p>ಬಮೂಲ್ ವ್ಯವಸ್ಥಾಪಕ ಬಿ.ಕೆ.ಜಗದೀಶ್, ಬಮುಲ್ ಟ್ರಸ್ಟ್ನ ಕಾರ್ಯದರ್ಶಿ ಪ್ರಸನ್ನಕುಮಾರ್, ಬಮೂಲ್ ನಿವೃತ್ತ ಪ್ರಧಾನ ವ್ಯವಸ್ಥಾಪಕ ಕೃಷ್ಣಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: ‘</strong>ಗ್ರಾಮೀಣ ಭಾಗದ ರೈತರ ಮಕ್ಕಳು ಪ್ರತಿಭಾವಂತರಾಗಿದ್ದಾರೆ. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಸಾಧನೆ ಮಾಡಬೇಕು’ ಎಂದು ಬಮುಲ್ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.</p>.<p>ಅವರು ಪಟ್ಟಣದಲ್ಲಿ ಬಮೂಲ್ ಕಲ್ಯಾಣ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 2019-20ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಸರ್ಕಾರಿ ಕೆಲಸಗಳನ್ನೇ ನಂಬಿಕೊಳ್ಳದೇ ವಿವಿಧ ಕ್ಷೇತ್ರಗಳಲ್ಲಿ ಕೌಶಲವನ್ನು ಬೆಳೆಸಿಕೊಂಡು ಪರ್ಯಾಯ ಉದ್ಯೋಗಗಳನ್ನು ಪಡೆಯುವ ದಿಸೆಯಲ್ಲಿ ಮುನ್ನುಗ್ಗಬೇಕು. ವೈಜ್ಞಾನಿಕ ಕೃಷಿ ಮತ್ತು ಹೈನುಗಾರಿಕೆಯನ್ನು ಪ್ರವೃತ್ತಿಯಾಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಲು ಅವಕಾಶಗಳಿವೆ’ ಎಂದರು.</p>.<p>‘ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ನೀಡುವ ಪ್ರತಿಭಾ ಪುರಸ್ಕಾರ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ರೈತ ಮಕ್ಕಳು ಸಹ ಇಂಜಿನಿಯರ್, ಡಾಕ್ಟರ್ಗಳಾಗಲು ಅವಕಾಶಗಳಿವೆ. ಸಾಧನೆ ಸಾಧಕನ ಸ್ವತ್ತೇ ವಿನಃ ಸೋಮಾರಿಯ ಸ್ವತ್ತಲ್ಲ. ಹಾಗಾಗಿ ವಿದ್ಯಾರ್ಥಿಗಳು ಶ್ರಮ ವಹಿಸಿ ಉನ್ನತ ಸಾಧನೆ ಮಾಡಬೇಕು’ ಎಂದರು.</p>.<p>‘ಕೊರೊನಾ ಲಾಕ್ಡೌನ್ನಿಂದಾಗಿ ಬಮೂಲ್ ಸಂಕಷ್ಟದಲ್ಲಿದ್ದರೂ ರೈತರ ಪರವಾಗಿ ನಿಲ್ಲುವ ರೈತರ ಒಕ್ಕೂಟವಾಗಿದೆ. ಬಮೂಲ್ ಸಂಸ್ಥೆ ವತಿಯಿಂದ ಚೀಸ್ ಮತ್ತು 90 ದಿನಗಳು ಬಳಕೆ ಮಾಡುವಂತಹ ತೃಪ್ತಿ ಹಾಲು ಸೇರಿದಂತೆ ವಿವಿಧ ನೂತನ ಉತ್ಪನ್ನಗಳನ್ನು ತಯಾರಿಸಲು ಚಿಂತನೆ ಮಾಡಲಾಗಿದೆ. ಬೇರೆ ಬೇರೆ ರಾಜ್ಯಗಳ ಗೀರ್ ಸೇರಿದಂತೆ ವಿವಿಧ ತಳಿಗಳ ಹಸುಗಳನ್ನು ರಾಜ್ಯದ ರೈತರಿಗೆ ನೀಡಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ’ ಎಂದರು.</p>.<p>ಬಮೂಲ್ ನಿರ್ದೇಶಕ ಬಿ.ಜಿ.ಆಂಜಿನಪ್ಪ ಮಾತನಾಡಿ, ‘ಕೊರೊನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಹಲವು ರೈತರಿಗೆ ಶಾಲಾ ಶುಲ್ಕ ಕಟ್ಟಲು ಸಮಸ್ಯೆಯಿದೆ. ಹೈನುಗಾರಿಕೆ ಮತ್ತು ಸಹಕಾರ ಸಂಘಗಳ ಬಟವಾಡೆಯನ್ನೇ ನಂಬಿರುವ ರೈತರಿಗೆ ಪ್ರತಿಭಾ ಪುರಸ್ಕಾರದ ಪ್ರೋತ್ಸಾಹಧನ ನೆರವಾಗಲಿದೆ’ ಎಂದರು.</p>.<p>‘ಐಎಎಸ್ ಮತ್ತು ಕೆಎಎಸ್ ತರಬೇತಿ ಪಡೆಯುವ ಹಾಲು ಉತ್ಪಾದಕ ಸಹಕಾರ ಸಂಘಗಳ ಸದಸ್ಯರ ಮಕ್ಕಳಿಗೆ ಬಮೂಲ್ ವತಿಯಿಂದ ₹ 50 ಸಾವಿರ, ಐಟಿಐ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ₹ 10 ಸಾವಿರ ನೆರವು ನೀಡಲಾಗುತ್ತಿದೆ. ಆದರೆ ಈ ವಿಭಾಗದಲ್ಲಿ ಅರ್ಜಿಗಳೇ ಸಲ್ಲಿಕೆಯಾಗುತ್ತಿಲ್ಲ. ಹಾಗಾಗಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.</p>.<p>ಆನೇಕಲ್ ಶೀಥಲ ಕೇಂದ್ರದ ಉಪ ವ್ಯವಸ್ಥಾಪಕ ಡಾ.ಮೋಹನ್ಕುಮಾರ್ ಮಾತನಾಡಿ, ‘ಆನೇಕಲ್ ತಾಲ್ಲೂಕಿನ 300 ಮಂದಿ ವಿದ್ಯಾರ್ಥಿಗಳಿಗೆ ಒಟ್ಟು ₹ 10 ಲಕ್ಷಗಳ ಪ್ರೋತ್ಸಾಹಧನ ಚೆಕ್ಗಳನ್ನು ವಿತರಿಸಲಾಗಿದೆ. ರೈತರಿಗೆ ಹಲವಾರು ಪ್ರೋತ್ಸಾಹ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಹಾಲು ಕರೆಯುವ ಯಂತ್ರದ ಬೆಲೆ 46 ಸಾವಿರ ರೂಗಳಿದೆ. ಆದರೆ ಸಬ್ಸಿಡಿ ದರದಲ್ಲಿ 23 ಸಾವಿರ ರೂಗಳಿಗೆ ಯಂತ್ರ ನೀಡಲಾಗುತ್ತದೆ. ಮ್ಯಾಟ್, ಹುಲ್ಲು ಕತ್ತರಿಸುವ ಯಂತ್ರ ಸೇರಿದಂತೆ ಅಗತ್ಯ ಪರಿಕರಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುತ್ತದೆ’ ಎಂದರು.</p>.<p>ಬಮೂಲ್ ವ್ಯವಸ್ಥಾಪಕ ಬಿ.ಕೆ.ಜಗದೀಶ್, ಬಮುಲ್ ಟ್ರಸ್ಟ್ನ ಕಾರ್ಯದರ್ಶಿ ಪ್ರಸನ್ನಕುಮಾರ್, ಬಮೂಲ್ ನಿವೃತ್ತ ಪ್ರಧಾನ ವ್ಯವಸ್ಥಾಪಕ ಕೃಷ್ಣಾರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>