<p><strong>ಬನ್ನೇರುಘಟ್ಟ (ಆನೇಕಲ್): </strong>ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನೀರಿನ ಸರಬರಾಜು ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಬುಧವಾರ ನಡೆಯಿತು.</p>.<p>ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಅಂಗವಿಕಲರಿಗೆ ಅಗತ್ಯ ಸಲಕರಣೆ ವಿತರಣೆ, ಸ್ತ್ರೀಶಕ್ತಿ ಸಂಘಗಳ ಮಹಿಳೆಯರಿಗೆ ಸಾಲ ಸೌಲಭ್ಯ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಬನ್ನೇರುಘಟ್ಟ ಗ್ರಾಮದ ಪ್ರಮುಖ ಬೀದಿಗಳಲ್ಲಿ 10ಕ್ಕೂ ಹೆಚ್ಚು ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಿ ಚಂಪಕಧಾಮ ದೇವಾಲಯದ ಮುಂಭಾಗದಲ್ಲಿ ಹಾಕಲಾಗಿದ್ದ ವೇದಿಕೆಯಲ್ಲಿ ಸೌಲಭ್ಯ ವಿತರಿಸಲಾಯಿತು.</p>.<p>ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಸಿ.ಮಂಜುನಾಥ್ ಮಾತನಾಡಿ, ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಕಾಡಂಚಿನ ಗ್ರಾಮಗಳಿಂದ ಕೂಡಿದೆ. ಈ ಗ್ರಾಮಗಳಿಗೆ ಕಾವೇರಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಿ ಉದ್ಘಾಟಿಸಲಾಗಿದೆ. ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯ ಕಡಿಮೆ ಮಾಡಬೇಕೆಂಬ ಪ್ರಕರಣವಿದ್ದು ಸೂಕ್ಷ್ಮ ವಲಯವು ಈಗಿರುಷ್ಟೇ ಇರುವುದರಿಂದ ಈ ಭಾಗದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಸೂರಿಲ್ಲದವರಿಗೆ ಸೂರು ಕಲ್ಪಿಸಲು ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 20 ಎಕರೆ ಜಾಗ ಮೀಸಲಿಡಲಾಗಿದೆ. ಹಕ್ಕಿಪಿಕ್ಕಿ ಕಾಲೋನಿಗೆ ಸಾರ್ವಜನಿಕರಿಗೆ ಹಕ್ಕುಪತ್ರ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಬನ್ನೇರುಘಟ್ಟದವರೆಗೂ ಮೆಟ್ರೋ ವಿಸ್ತರಣೆಯಾಗುವ ನಿಟ್ಟಿನಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದರು.</p>.<p>ಪಿಡಿಒ ರಮೇಶ್ ಮಾತನಾಡಿ, ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಸಮಿತಿಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧವಾಗಿದ್ದು ಶೀಘ್ರದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ವಿತರಿಸಲಿದ್ದಾರೆ. ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸೌಲಭ್ಯ ತಲುಪಿಸಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥ್, ಎಡಿಎಲ್ಆರ್ ಮದನ್, ಸಿಡಿಪಿಒ ಮಹೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ವಿನೋದ್ ಕುಮಾರ್, ಅಚ್ಯುತರಾಜು, ನವೀನ್, ಸುಮಿತ್ರಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬನ್ನೇರುಘಟ್ಟ (ಆನೇಕಲ್): </strong>ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕಾವೇರಿ ನೀರಿನ ಸರಬರಾಜು ಉದ್ಘಾಟನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಬುಧವಾರ ನಡೆಯಿತು.</p>.<p>ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಅಂಗವಿಕಲರಿಗೆ ಅಗತ್ಯ ಸಲಕರಣೆ ವಿತರಣೆ, ಸ್ತ್ರೀಶಕ್ತಿ ಸಂಘಗಳ ಮಹಿಳೆಯರಿಗೆ ಸಾಲ ಸೌಲಭ್ಯ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಬನ್ನೇರುಘಟ್ಟ ಗ್ರಾಮದ ಪ್ರಮುಖ ಬೀದಿಗಳಲ್ಲಿ 10ಕ್ಕೂ ಹೆಚ್ಚು ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಿ ಚಂಪಕಧಾಮ ದೇವಾಲಯದ ಮುಂಭಾಗದಲ್ಲಿ ಹಾಕಲಾಗಿದ್ದ ವೇದಿಕೆಯಲ್ಲಿ ಸೌಲಭ್ಯ ವಿತರಿಸಲಾಯಿತು.</p>.<p>ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಸಿ.ಮಂಜುನಾಥ್ ಮಾತನಾಡಿ, ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಕಾಡಂಚಿನ ಗ್ರಾಮಗಳಿಂದ ಕೂಡಿದೆ. ಈ ಗ್ರಾಮಗಳಿಗೆ ಕಾವೇರಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಿ ಉದ್ಘಾಟಿಸಲಾಗಿದೆ. ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯ ಕಡಿಮೆ ಮಾಡಬೇಕೆಂಬ ಪ್ರಕರಣವಿದ್ದು ಸೂಕ್ಷ್ಮ ವಲಯವು ಈಗಿರುಷ್ಟೇ ಇರುವುದರಿಂದ ಈ ಭಾಗದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಸೂರಿಲ್ಲದವರಿಗೆ ಸೂರು ಕಲ್ಪಿಸಲು ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 20 ಎಕರೆ ಜಾಗ ಮೀಸಲಿಡಲಾಗಿದೆ. ಹಕ್ಕಿಪಿಕ್ಕಿ ಕಾಲೋನಿಗೆ ಸಾರ್ವಜನಿಕರಿಗೆ ಹಕ್ಕುಪತ್ರ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಬನ್ನೇರುಘಟ್ಟದವರೆಗೂ ಮೆಟ್ರೋ ವಿಸ್ತರಣೆಯಾಗುವ ನಿಟ್ಟಿನಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದರು.</p>.<p>ಪಿಡಿಒ ರಮೇಶ್ ಮಾತನಾಡಿ, ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಹಕ್ಕು ಸಮಿತಿಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧವಾಗಿದ್ದು ಶೀಘ್ರದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ವಿತರಿಸಲಿದ್ದಾರೆ. ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸೌಲಭ್ಯ ತಲುಪಿಸಲಾಗಿದೆ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥ್, ಎಡಿಎಲ್ಆರ್ ಮದನ್, ಸಿಡಿಪಿಒ ಮಹೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ವಿನೋದ್ ಕುಮಾರ್, ಅಚ್ಯುತರಾಜು, ನವೀನ್, ಸುಮಿತ್ರಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>