ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬನ್ನೇರುಘಟ್ಟ: ಮತ್ತೆ ಮೂರು ಜಿಂಕೆಗಳ ಸಾವು

Published 20 ಸೆಪ್ಟೆಂಬರ್ 2023, 17:09 IST
Last Updated 20 ಸೆಪ್ಟೆಂಬರ್ 2023, 17:09 IST
ಅಕ್ಷರ ಗಾತ್ರ

ಆನೇಕಲ್ : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಜಿಂಕೆಗಳ ಸಾವು ಸರಣಿ ಮುಂದುವರಿದಿದೆ. ಬುಧವಾರ ಮತ್ತೆ ಮೂರು ಜಿಂಕೆಗಳು ಸಾವನ್ನಪ್ಪಿವೆ. ವಾರದಿಂದ ಈಚೆಗೆ ಒಟ್ಟು 13 ಜಿಂಕೆಗಳು ಮೃತಪಟ್ಟಿದ್ದು, ಸಾವಿನ ಸಂಖ್ಯೆ 16ಕ್ಕೇರಿದೆ.

’ಬೆಂಗಳೂರಿನ ಸೇಂಟ್‌ ಜಾನ್ಸ್‌ ಆಸ್ಪತ್ರೆ ಉದ್ಯಾನದಿಂದ ತರುವಾಗಲೇ ರಕ್ತಹೀನತೆಯಿಂದ ಬಳಲುತ್ತಿದ್ದವು. ಇಲ್ಲಿ ನೀಡಲಾಗುತ್ತಿರುವ ಆಹಾರಕ್ಕೆ ಹೊಂದಿಕೊಳ್ಳಲು ಪ್ರಯತ್ನ ಮಾಡುತ್ತಿವೆ. ಚಿಕಿತ್ಸೆ ನೀಡಲು ಮುಂದಾದರೆ ಕೆಲವೊಮ್ಮೆ ಹೃದಯಾಘಾತಕ್ಕೆ ಒಳಗಾಗುತ್ತಿವೆ‘ ಎಂದು ಬನ್ನೇರುಘಟ್ಟ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್‌ ತಿಳಿಸಿದರು.

ಜಿಂಕೆಗಳ ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ. ವರದಿ ಬಂದ ನಂತರ ತಜ್ಞರು ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು
ಸೂರ್ಯಸೇನ್, ಕಾರ್ಯನಿರ್ವಾಹಕ ನಿರ್ದೇಶಕ, ಬನ್ನೇರುಘಟ್ಟ ಉದ್ಯಾನ

ನಾಡಿನ ವಾತಾವರಣದಲ್ಲಿ ಬೆಳೆದಿರುವ ಜಿಂಕೆಗಳು, ಕಾಡಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕೆಲ ಸಮಯ ಬೇಕಾಗುತ್ತದೆ. ವೈದ್ಯರು ಮತ್ತು ತಜ್ಞರ ಸಲಹೆಯಂತೆ ಔಷದೋಪಚಾರ ‌ಮುಂದುವರಿದಿದೆ ಎಂದರು.

ಗುರುವಾರ ಸಚಿವ ಭೇಟಿ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಚಿರತೆ ಮತ್ತು ಜಿಂಕೆಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ, ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಭೇಟಿ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT