‘ನನ್ನ ಕ್ಷೇತ್ರದ ಅಲ್ಪಸಂಖ್ಯಾತರಿಗೆ ನಾನು ನನ್ನ ಶಕ್ತಿ ಮೀರಿ ಸಹಾಯ ಮಾಡಿದ್ದೇನೆ. ಆದರೂ, ಅವರು ನನಗೆ ಮೋಸ ಮಾಡಿದರು. ಮುಸ್ಲಿಮರು ಬಿಜೆಪಿಗೆ ಮತ ಹಾಕಲಿಲ್ಲ. ಬಿಜೆಪಿ ನೀಡಿದ ನೋಟು ಪಡೆದು ಅವರು ಕಾಂಗ್ರೆಸ್ಗೆ ವೋಟು ಹಾಕಿದರು. ಕಳದೆ ಮೂರು ಚುನಾವಣೆಗಳಲ್ಲಿ ಬಿಜೆಪಿ ನೀಡಿದ ಎಲ್ಲಾ ಸವಲತ್ತು ಪಡೆದು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ’ ಎಂದು ಅಸಮಾಧಾನ ಹೊರಹಾಕಿದರು.
‘ಕ್ಷೇತ್ರದಲ್ಲಿ ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸುತ್ತೇನೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರು ಎದೆಗುಂದಬೇಡಿ. ನಾನು ಹೊಸಕೋಟೆಯಲ್ಲಿಯೇ ಇರುತ್ತೇನೆ’ ಎಂದು ಅಭಯ ನೀಡಿದರು.