<p><strong>ದೊಡ್ಡಬಳ್ಳಾಪುರ: </strong>ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ದಿನೇ ದಿನೇ ರಂಗೇರುತ್ತಿದ್ದು, ಸೋಮವಾರ ಒಂದೇ ದಿನ 27 ನಾಮಪತ್ರಗಳು ಸಲ್ಲಿಸಿದ್ದು, ಇಲ್ಲಿಯವರೆಗೆ ಒಟ್ಟು 35 ನಾಮಪತ್ರ ಸಲ್ಲಿಕೆಯಾಗಿವೆ.</p>.<p>19 ವಾರ್ಡ್ಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 12ನೇ ವಾರ್ಡ್ ಬ್ಯಾಂಕ್ ಸರ್ಕಲ್(ಪಶ್ಚಿಮ ಭಾಗ); ಸಾಮಾನ್ಯ ಕ್ಷೇತ್ರದಿಂದ ಈವರೆಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಉಳಿದ 18 ವಾರ್ಡ್ಗಳಿಂದ ಈವರೆಗೆ ಬಿಜೆಪಿಯಿಂದ 18, ಜೆಡಿಎಸ್ನಿಂದ 4 ಹಾಗೂ ಪಕ್ಷೇತರರಾಗಿ 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.</p>.<p>ಡಿ.9 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಸೋಮವಾರ ಚುನಾವಣಾಧಿಕಾರಿಗಳ ಕಚೇರಿಯ ಮುಂದೆ ವಿವಿಧ ಪಕ್ಷಗಳ ಕಾರ್ಯಕರ್ತರು ಬೆಂಬಲಿಗರ ದಂಡೇ ನೆರೆದಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಡಿ.10 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.</p>.<p><strong>ನಗರಸಭೆ ಉಪಚುನಾವಣೆ: </strong>ದೊಡ್ಡಬಳ್ಳಾಪುರ ನಗರಸಭೆಯ 21 ನೇ ವಾರ್ಡ್ ಹೇಮಾವತಿಪೇಟೆ ವಾರ್ಡ್ಗೆ ಉಪಚುನಾವಣೆಗೆ ಈವರೆಗೆ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ ಕಾಂಗ್ರೆಸ್ ನಿಂದ ಕೆ.ಜಿ.ದಿನೇಶ ಹಾಗೂ ಪಕ್ಷೇತರರಾಗಿ ಜಿ.ಆರ್.ಹೇಮಂತಕುಮಾರ್ ನಾಮಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿಯಿಂದ ಜಿ.ಜೆ.ನವೀನ್ ನಾಮಪತ್ರ ಸಲ್ಲಿಸಿದ್ದರು.</p>.<p><strong>ಮೆರವಣಿ: </strong>ಕಾಂಗ್ರೆಸ್ ಅಭ್ಯರ್ಥಿ ಕೆ.ಜಿ.ದಿನೇಶ ಅವರು ನಗರದ ಹೇಮಾವತಿಪೇಟೆಯ ನಾಗರಕಲ್ಲು ದೇವಾಲಯದ ಬಳಿಯಿಂದ ನಗರಸಭೆ ಚುನಾವಣಾ ಕಚೇರಿಯವರೆಗೆ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳೊಂದಿಗೆ ಮೆರವಣಿಗೆ ಮೂಲಕ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ನಗರಸಭೆ ಸದಸ್ಯ ಎಚ್.ಎಸ್.ಶಿವಶಂಕರ್, ಮುಖಂಡರಾದ ಆಂಜಿನ ಮೂರ್ತಿ, ಮುನಿರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ದಿನೇ ದಿನೇ ರಂಗೇರುತ್ತಿದ್ದು, ಸೋಮವಾರ ಒಂದೇ ದಿನ 27 ನಾಮಪತ್ರಗಳು ಸಲ್ಲಿಸಿದ್ದು, ಇಲ್ಲಿಯವರೆಗೆ ಒಟ್ಟು 35 ನಾಮಪತ್ರ ಸಲ್ಲಿಕೆಯಾಗಿವೆ.</p>.<p>19 ವಾರ್ಡ್ಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ 12ನೇ ವಾರ್ಡ್ ಬ್ಯಾಂಕ್ ಸರ್ಕಲ್(ಪಶ್ಚಿಮ ಭಾಗ); ಸಾಮಾನ್ಯ ಕ್ಷೇತ್ರದಿಂದ ಈವರೆಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಉಳಿದ 18 ವಾರ್ಡ್ಗಳಿಂದ ಈವರೆಗೆ ಬಿಜೆಪಿಯಿಂದ 18, ಜೆಡಿಎಸ್ನಿಂದ 4 ಹಾಗೂ ಪಕ್ಷೇತರರಾಗಿ 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.</p>.<p>ಡಿ.9 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಸೋಮವಾರ ಚುನಾವಣಾಧಿಕಾರಿಗಳ ಕಚೇರಿಯ ಮುಂದೆ ವಿವಿಧ ಪಕ್ಷಗಳ ಕಾರ್ಯಕರ್ತರು ಬೆಂಬಲಿಗರ ದಂಡೇ ನೆರೆದಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಡಿ.10 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.</p>.<p><strong>ನಗರಸಭೆ ಉಪಚುನಾವಣೆ: </strong>ದೊಡ್ಡಬಳ್ಳಾಪುರ ನಗರಸಭೆಯ 21 ನೇ ವಾರ್ಡ್ ಹೇಮಾವತಿಪೇಟೆ ವಾರ್ಡ್ಗೆ ಉಪಚುನಾವಣೆಗೆ ಈವರೆಗೆ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ ಕಾಂಗ್ರೆಸ್ ನಿಂದ ಕೆ.ಜಿ.ದಿನೇಶ ಹಾಗೂ ಪಕ್ಷೇತರರಾಗಿ ಜಿ.ಆರ್.ಹೇಮಂತಕುಮಾರ್ ನಾಮಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿಯಿಂದ ಜಿ.ಜೆ.ನವೀನ್ ನಾಮಪತ್ರ ಸಲ್ಲಿಸಿದ್ದರು.</p>.<p><strong>ಮೆರವಣಿ: </strong>ಕಾಂಗ್ರೆಸ್ ಅಭ್ಯರ್ಥಿ ಕೆ.ಜಿ.ದಿನೇಶ ಅವರು ನಗರದ ಹೇಮಾವತಿಪೇಟೆಯ ನಾಗರಕಲ್ಲು ದೇವಾಲಯದ ಬಳಿಯಿಂದ ನಗರಸಭೆ ಚುನಾವಣಾ ಕಚೇರಿಯವರೆಗೆ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳೊಂದಿಗೆ ಮೆರವಣಿಗೆ ಮೂಲಕ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ನಗರಸಭೆ ಸದಸ್ಯ ಎಚ್.ಎಸ್.ಶಿವಶಂಕರ್, ಮುಖಂಡರಾದ ಆಂಜಿನ ಮೂರ್ತಿ, ಮುನಿರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>