<p><strong>ದೊಡ್ಡಬಳ್ಳಾಪುರ: </strong>ಇಲ್ಲಿನ ಬಾಶೆಟ್ಟಿಹಳ್ಳಿ ಕೈಗಾರಿಕ ಪ್ರದೇಶದ ಅಡ್ವಾನ್ಸ್ ಕೇಬಲ್ ಕಾರ್ಖಾನೆಯಲ್ಲಿ ಸೋಮವಾರ ಸಂಜೆ 5ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಸತತ ನಾಲ್ಕು ತಾಸುಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. </p>.<p>ಬೆಂಗಳೂರಿನಿಂದ ಬಂದಿದ್ದ ಎನ್ಡಿಆರ್ಎಫ್ ಸಿಬ್ಬಂದಿ ಮತ್ತು ಹತ್ತು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಲೇ ಇದೆ. ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. </p>.<p>ಕೈಗಾರಿಕಾ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿದೆ.ಈ ಕಾರ್ಖಾನೆ ಸುತ್ತಲೂ ಇತರ ಕೈಗಾರಿಕಾ ಘಟಕಗಳಿರುವ ಕಾರಣ ಅವುಗಳಿಗೂ ಬೆಂಕಿ ತಗಲುವ ಆತಂಕ ಎದುರಾಗಿದೆ. </p>.<p>ಪ್ರಾಥಮಿಕ ವರದಿಗಳ ಪ್ರಕಾರ ಘಟನೆಯಲ್ಲಿ ಪ್ರಾಣಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಎಂದು ತಿಳಿದು ಬಂದಿದೆ.</p>.<p>ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕೇಬಲ್ ತಯಾರಿಕಾ ಕಂಪನಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p>.<p>ಬೆಂಗಳೂರು ರಾಜ್ಯ ಹೆದ್ದಾರಿಗೆ ಸಮೀಪವೇ ಕಾರ್ಖಾನೆ ಇರುವುದರಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಘಟನಾ ಸ್ಥಳದಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಲ್ಲಪ್ಪ ಕೆ.ಯಗೋಳ ಭೇಟಿ ನೀಡಿ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಇಲ್ಲಿನ ಬಾಶೆಟ್ಟಿಹಳ್ಳಿ ಕೈಗಾರಿಕ ಪ್ರದೇಶದ ಅಡ್ವಾನ್ಸ್ ಕೇಬಲ್ ಕಾರ್ಖಾನೆಯಲ್ಲಿ ಸೋಮವಾರ ಸಂಜೆ 5ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಸತತ ನಾಲ್ಕು ತಾಸುಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. </p>.<p>ಬೆಂಗಳೂರಿನಿಂದ ಬಂದಿದ್ದ ಎನ್ಡಿಆರ್ಎಫ್ ಸಿಬ್ಬಂದಿ ಮತ್ತು ಹತ್ತು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಲೇ ಇದೆ. ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. </p>.<p>ಕೈಗಾರಿಕಾ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿಕೊಂಡಿದೆ.ಈ ಕಾರ್ಖಾನೆ ಸುತ್ತಲೂ ಇತರ ಕೈಗಾರಿಕಾ ಘಟಕಗಳಿರುವ ಕಾರಣ ಅವುಗಳಿಗೂ ಬೆಂಕಿ ತಗಲುವ ಆತಂಕ ಎದುರಾಗಿದೆ. </p>.<p>ಪ್ರಾಥಮಿಕ ವರದಿಗಳ ಪ್ರಕಾರ ಘಟನೆಯಲ್ಲಿ ಪ್ರಾಣಹಾನಿಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬೆಂಕಿ ಕಾಣಿಸಿಕೊಳ್ಳುತ್ತಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಎಂದು ತಿಳಿದು ಬಂದಿದೆ.</p>.<p>ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕೇಬಲ್ ತಯಾರಿಕಾ ಕಂಪನಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.</p>.<p>ಬೆಂಗಳೂರು ರಾಜ್ಯ ಹೆದ್ದಾರಿಗೆ ಸಮೀಪವೇ ಕಾರ್ಖಾನೆ ಇರುವುದರಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಘಟನಾ ಸ್ಥಳದಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಲ್ಲಪ್ಪ ಕೆ.ಯಗೋಳ ಭೇಟಿ ನೀಡಿ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>