ಪಾಲಿಕೆಯ ಎಂಟೂ ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ. ಜರಗನಹಳ್ಳಿ, ಬನಶಂಕರಿ ಎರಡನೇ ಹಂತ, ಎಚ್.ಎಂ.ಟಿ ಲೇಔಟ್, ಯಡಿಯೂರು, ಬೆಳ್ಳಂದೂರು, ಸಿದ್ದಣ್ಣ ಲೇಔಟ್, ತಿಗಳರ ಪಾಳ್ಯ (ಹೂಡಿ), ನ್ಯೂ ಬಿ.ಇ.ಎಲ್ ರಸ್ತೆ, ಭೂಪಸಂದ್ರ, ಹೆಬ್ಬಾಳ ಮುಖ್ಯ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಕಾಮಗಾರಿ ನಡೆಸಲಾಗಿದೆ.