‘ಕಾನೂನು ಸೇವೆಗಳ ಪ್ರಾಧಿಕಾರದ ಬೃಹತ್ ಶಿಬಿರದಲ್ಲಿ ಶಿಕ್ಷಣ, ಕೃಷಿ, ಆರೋಗ್ಯ ಮೊದಲಾದ ಇಲಾಖೆಗಳ ವತಿಯಿಂದ ಇರುವಂತಹ ಕಾರ್ಯಕ್ರಮ ಮತ್ತು ಯೋಜನೆಗಳ ಬಗ್ಗೆ, ಹಿರಿಯರಿಗೆ ಮತ್ತು ನಿರಾಶ್ರಿತರಿಗೆ ಲಭ್ಯವಿರುವ ಪುನರ್ವಸತಿ ಸೌಲಭ್ಯದ ಬಗ್ಗೆ ಮಾಹಿತಿ ನೀಡಬೇಕು. ವೃದ್ಧಾಪ್ಯದಲ್ಲಿ ಮಕ್ಕಳು ಸರಿಯಾಗಿ ನೋಡಿಕೊಳ್ಳದೇ ಇದ್ದಲ್ಲಿ ಕಾನೂನಾತ್ಮಕವಾಗಿ ದಾವೆ (ದೂರು) ಸಲ್ಲಿಸುವುದರ ಬಗ್ಗೆ ಹಾಗೂ ಅಸಂಘಟಿತ ಕಾರ್ಮಿಕರಿಗೆ ಇರುವ ಸೇವಾ ಕಾರ್ಯಕ್ರಮಗಳ ಬಗ್ಗೆ ಹೆಚ್ಚು ಒತ್ತು ನೀಡಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು’ ಎಂದರು.