ಬೆಳಗಿನ ಜಾವ ತಟ್ನಹಳ್ಳಿಯಲ್ಲಿ ನಾರಾಯಣರೆಡ್ಡಿ ಎಂಬ ವೃದ್ಧ ಮತ್ತು ಬಿಹಾರ ಮೂಲದ ಸುಹಾಲ್ ಎಂಬುವರನ್ನು ಕಚ್ಚಿ ಗಾಯಗೊಳಿಸಿದೆ. ಇಲ್ಲಿಯೇ ಅರಣ್ಯ ಇಲಾಖೆಯ ಸಿಬ್ಬಂದಿಗೆ ಕರಡಿ ಕಾಣಿಸಿಕೊಂಡಿದೆ. ತಕ್ಷಣ ಇಲಾಖೆಯ ಆರು ತಂಡ ತಟ್ನಹಳ್ಳಿ, ಮಾಯಸಂದ್ರ, ಸಮಂದೂರು, ಶೆಟ್ಟಿಹಳ್ಳಿ ಸೇರಿದಂತೆ ವಿವಿಧ ಕಡೆ ಕರಡಿ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ತೊಡಗಿವೆ. ವಲಯ ಅರಣ್ಯಾಧಿಕಾರಿಗಳಾದ ಕೃಷ್ಣ, ಗಣೇಶ್, ವೈದ್ಯಾಧಿಕಾರಿ ಡಾ.ಉಮಾಶಂಕರ್, ಡಾ.ಮಂಜುನಾಥ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.