ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಯುವ ಅಕಾಡೆಮಿ ಸಂಸ್ಥಾಪಕ ಸಿ.ಮಂಜುನಾಥ್ ಹೇಳಿದರು.
ನಗರದ ಕಾವೇರಿ ಕಲ್ಯಾಣ ಮಂಟಪದಲ್ಲಿ ಯುವ ಅಕಾಡೆಮಿ ಮತ್ತು ಮಹಾಗ್ರೀವ ಅಕಾಡೆಮಿ ವತಿಯಿಂದ ನಡೆದ ಓಪನ್ ರಾಫಿಡ್ ಚೆಸ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳಲ್ಲಿ ಚೆಸ್ ಬಗ್ಗೆ ಆಸಕ್ತಿ ಹೆಚ್ಚಿಸಲು ಪಂದ್ಯಾವಳಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುವ ಜತೆಗೆ ಕಲಿಕೆಗೂ ನೆರವಾಗಲಿದೆ. ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು ನಿರಂತರ ಅಭ್ಯಾಸದಿಂದ ಯಶಸ್ಸು ಗಳಿಸಬೇಕು ಎಂದರು.
ಪಂದ್ಯಾವಳಿಯಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. 50 ಜನ ವಿದ್ಯಾರ್ಥಿಗಳಿಗೆ ಪದಕಗಳನ್ನು ವಿತರಿಸಲಾಯಿತು. ವಕೀಲರಾದ ಸಂಜೀವಪ್ಪ, ಮೋಹನ್,ರಾಷ್ಟ್ರೀಯ ಚೆಸ್ ಆಟಗಾರ್ತಿ ಜಯಶ್ರೀ ಇದ್ದರು.