<p><strong>ದೊಡ್ಡಬಳ್ಳಾಪುರ</strong>: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಯುವ ಅಕಾಡೆಮಿ ಸಂಸ್ಥಾಪಕ ಸಿ.ಮಂಜುನಾಥ್ ಹೇಳಿದರು.</p>.<p>ನಗರದ ಕಾವೇರಿ ಕಲ್ಯಾಣ ಮಂಟಪದಲ್ಲಿ ಯುವ ಅಕಾಡೆಮಿ ಮತ್ತು ಮಹಾಗ್ರೀವ ಅಕಾಡೆಮಿ ವತಿಯಿಂದ ನಡೆದ ಓಪನ್ ರಾಫಿಡ್ ಚೆಸ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಕ್ಕಳಲ್ಲಿ ಚೆಸ್ ಬಗ್ಗೆ ಆಸಕ್ತಿ ಹೆಚ್ಚಿಸಲು ಪಂದ್ಯಾವಳಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುವ ಜತೆಗೆ ಕಲಿಕೆಗೂ ನೆರವಾಗಲಿದೆ. ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು ನಿರಂತರ ಅಭ್ಯಾಸದಿಂದ ಯಶಸ್ಸು ಗಳಿಸಬೇಕು ಎಂದರು.</p>.<p>ಪಂದ್ಯಾವಳಿಯಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. 50 ಜನ ವಿದ್ಯಾರ್ಥಿಗಳಿಗೆ ಪದಕಗಳನ್ನು ವಿತರಿಸಲಾಯಿತು. ವಕೀಲರಾದ ಸಂಜೀವಪ್ಪ, ಮೋಹನ್,ರಾಷ್ಟ್ರೀಯ ಚೆಸ್ ಆಟಗಾರ್ತಿ ಜಯಶ್ರೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಯುವ ಅಕಾಡೆಮಿ ಸಂಸ್ಥಾಪಕ ಸಿ.ಮಂಜುನಾಥ್ ಹೇಳಿದರು.</p>.<p>ನಗರದ ಕಾವೇರಿ ಕಲ್ಯಾಣ ಮಂಟಪದಲ್ಲಿ ಯುವ ಅಕಾಡೆಮಿ ಮತ್ತು ಮಹಾಗ್ರೀವ ಅಕಾಡೆಮಿ ವತಿಯಿಂದ ನಡೆದ ಓಪನ್ ರಾಫಿಡ್ ಚೆಸ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಕ್ಕಳಲ್ಲಿ ಚೆಸ್ ಬಗ್ಗೆ ಆಸಕ್ತಿ ಹೆಚ್ಚಿಸಲು ಪಂದ್ಯಾವಳಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುವ ಜತೆಗೆ ಕಲಿಕೆಗೂ ನೆರವಾಗಲಿದೆ. ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು ನಿರಂತರ ಅಭ್ಯಾಸದಿಂದ ಯಶಸ್ಸು ಗಳಿಸಬೇಕು ಎಂದರು.</p>.<p>ಪಂದ್ಯಾವಳಿಯಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. 50 ಜನ ವಿದ್ಯಾರ್ಥಿಗಳಿಗೆ ಪದಕಗಳನ್ನು ವಿತರಿಸಲಾಯಿತು. ವಕೀಲರಾದ ಸಂಜೀವಪ್ಪ, ಮೋಹನ್,ರಾಷ್ಟ್ರೀಯ ಚೆಸ್ ಆಟಗಾರ್ತಿ ಜಯಶ್ರೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>