<p><strong>ಹೊಸಕೋಟೆ: </strong>ನಗರ ಹೊರವಲಯದ ಬೂದಿಗೆರೆ ಕ್ರಾಸ್ನಲ್ಲಿರುವ ಬೆಂಗಾಲ್ ಲ್ಯಾಂಪ್ಸ್ ಕಾರ್ಖಾನೆಯ ಕಾರ್ಮಿಕರ ಸರ್ವ ಸದಸ್ಯರ ಸಭೆಯು ಆ. 8ರಂದು ಬೆಳಿಗ್ಗೆ 10.30ಕ್ಕೆ ಕಾರ್ಖಾನೆಯ ಮುಂಭಾಗದಲ್ಲಿ ನಡೆಯಲಿದ್ದು, ಎಲ್ಲಾ ಸದಸ್ಯರು ಭಾಗವಹಿಸಬೇಕು ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಕ್ಯಾಸೆಟ್ ನಾಗರಾಜ್ತಿಳಿಸಿದ್ದಾರೆ.</p>.<p>ಕಾರ್ಮಿಕರಿಗೆ ಯಾವುದೇ ಮಾಹಿತಿ ನೀಡದೆ ಕಳೆದ 35 ವರ್ಷಗಳ ಹಿಂದೆ ಕಾರ್ಖಾನೆಯನ್ನು ಮುಚ್ಚಿ ಕಾರ್ಮಿಕರನ್ನು ನಡುನೀರಿನಲ್ಲಿ ಬಿಟ್ಟು ಹೋಗಿದ್ದ ಕಾರ್ಖಾನೆ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಬಗ್ಗೆ ಈವರೆಗೆ ಆಗಿರುವ ಬೆಳವಣಿಗೆಯನ್ನು ವಕೀಲರ ಸಭೆಯಲ್ಲಿ ತಿಳಿಸಲಾಗಿದೆ. ಕಾರ್ಮಿಕರ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ಕ್ರಮಗಳ ಮಾಹಿತಿಯನ್ನು ವಕೀಲರು ಸಭೆಗೆ ತಿಳಿಸುತ್ತಾರೆ. ಆದ್ದರಿಂದ ಈ ಸಭೆ ಹೆಚ್ಚಿನ ಮಹತ್ವದ್ದಾಗಿದೆ. ಎಲ್ಲಾ ಕಾರ್ಮಿಕರು ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಸಂಘದ ಕಾರ್ಯದರ್ಶಿ ಅಬ್ದುಲ್ಲಾ ಸಾಬ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ನಗರ ಹೊರವಲಯದ ಬೂದಿಗೆರೆ ಕ್ರಾಸ್ನಲ್ಲಿರುವ ಬೆಂಗಾಲ್ ಲ್ಯಾಂಪ್ಸ್ ಕಾರ್ಖಾನೆಯ ಕಾರ್ಮಿಕರ ಸರ್ವ ಸದಸ್ಯರ ಸಭೆಯು ಆ. 8ರಂದು ಬೆಳಿಗ್ಗೆ 10.30ಕ್ಕೆ ಕಾರ್ಖಾನೆಯ ಮುಂಭಾಗದಲ್ಲಿ ನಡೆಯಲಿದ್ದು, ಎಲ್ಲಾ ಸದಸ್ಯರು ಭಾಗವಹಿಸಬೇಕು ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಕ್ಯಾಸೆಟ್ ನಾಗರಾಜ್ತಿಳಿಸಿದ್ದಾರೆ.</p>.<p>ಕಾರ್ಮಿಕರಿಗೆ ಯಾವುದೇ ಮಾಹಿತಿ ನೀಡದೆ ಕಳೆದ 35 ವರ್ಷಗಳ ಹಿಂದೆ ಕಾರ್ಖಾನೆಯನ್ನು ಮುಚ್ಚಿ ಕಾರ್ಮಿಕರನ್ನು ನಡುನೀರಿನಲ್ಲಿ ಬಿಟ್ಟು ಹೋಗಿದ್ದ ಕಾರ್ಖಾನೆ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಈ ಬಗ್ಗೆ ಈವರೆಗೆ ಆಗಿರುವ ಬೆಳವಣಿಗೆಯನ್ನು ವಕೀಲರ ಸಭೆಯಲ್ಲಿ ತಿಳಿಸಲಾಗಿದೆ. ಕಾರ್ಮಿಕರ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ಕ್ರಮಗಳ ಮಾಹಿತಿಯನ್ನು ವಕೀಲರು ಸಭೆಗೆ ತಿಳಿಸುತ್ತಾರೆ. ಆದ್ದರಿಂದ ಈ ಸಭೆ ಹೆಚ್ಚಿನ ಮಹತ್ವದ್ದಾಗಿದೆ. ಎಲ್ಲಾ ಕಾರ್ಮಿಕರು ತಪ್ಪದೇ ಸಭೆಗೆ ಹಾಜರಾಗಬೇಕು ಎಂದು ಸಂಘದ ಕಾರ್ಯದರ್ಶಿ ಅಬ್ದುಲ್ಲಾ ಸಾಬ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>